Featured

ಎಫ್.ಐ.ಆರ್ ಹಾಕಿಸುವುದೇ ಪ್ರಿಯಾಂಕ ಖರ್ಗೆ ಅವರ ಫುಲ್ ಟೈಮ್ ಕೆಲಸ : ತೇಜಸ್ವಿ ಸೂರ್ಯ – vishwanews24

ಎಫ್.ಐ.ಆರ್ ಹಾಕಿಸುವುದೇ ಪ್ರಿಯಾಂಕ ಖರ್ಗೆ ಅವರ ಫುಲ್ ಟೈಮ್ ಕೆಲಸ : ತೇಜಸ್ವಿ ಸೂರ್ಯ

ಹುಬ್ಬಳ್ಳಿ: ಪ್ರಿಯಾಂಕ ಖರ್ಗೆ ಶಾಸಕರಾದರೂ ಕ್ಷೇತ್ರದಲ್ಲಿ ಅವರಿಗೆ ಯಾವುದೇ ಕೆಲಸವಿಲ್ಲ ಅನ್ನಿಸುತ್ತದೆ. ಹುಡುಕಿ ಹುಡುಕಿ ಎಫ್.ಐ.ಆರ್ ಹಾಕಿಸುವುದೇ ಅವರು ಫುಲ್ ಟೈಮ್ ಕೆಲಸ ಮಾಡಿಕೊಂಡಿದ್ದಾರೆ. ಆದರೆ ಅವರು ಹಾಕಿರುವ ಕೇಸ್ ಗಳನ್ನು ಸುಪ್ರೀಂ ಕೋರ್ಟ್ ಛೀಮಾರಿ ಹಾಕಿ ವಾಪಸ್ ಕಳುಹಿಸುತ್ತದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಪಿಸಿ ಸಮಿತಿ ಹಾವೇರಿ ಭೇಟಿ ನೀಡಿದ ಸಂದರ್ಭದಲ್ಲಿ ರೈತನ ಅಹವಾಲು ಪಡೆದಿದ್ದೆವು. ಅವರ ಜಮೀನಿಗೆ ವಕ್ಫ್ ಮೊಹರು ಹಾಕಲಾಗಿತ್ತು. ಇದರಿಂದ ರೈತ ಸಣ್ಣಪ್ಪ ಎಂಬುವರು ರೈತ ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಕುಟುಂಬದವರು ಹೇಳಿದ್ದರು. ಇದು ಮಾಧ್ಯಮದಲ್ಲಿ ಪ್ರಸಾರ ಆಗಿತ್ತು. ಇದರ ಬಗ್ಗೆ ಎಕ್ಸ್ (ಟ್ವೀಟ್) ಮಾಡಿದ್ದೆ. ಇದನ್ನೇ ಇಟ್ಟುಕೊಂಡು ನನ್ನ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆ ಅವರು ಎಫ್.ಐ.ಆರ್ ಮಾಡಿಸಿದ್ದಾರೆ ಎಂದರು.

ನಾನು ಮಾಡಿದ ಟ್ವೀಟ್ ಗೆ ಹಾವೇರಿ ಎಸ್ಪಿ ಅಕೌಂಟ್ ರೀತಿ ಘಟನೆ ಆಗಿಲ್ಲ ಎಂದು ಮರು ಟ್ವೀಟ್ ಮಾಡಿದ್ದರು. ಕಾನೂನು ವ್ಯವಸ್ಥೆಗೆ ಗೌರವ ಇರುವುದರಿಂದ‌ ಟ್ವೀಟ್ ಡಿಲೀಟ್ ಮಾಡಿದೆ. ಆನಂತರ ನಾನು ಪರಿಶೀಲಿಸಿ ಹಾಕಬೇಕಿತ್ತೇನೋ ಎಂದು ಅದನ್ನು ರೀ ಟ್ವೀಟ್ ಮಾಡಿರುತ್ತೇನೆ. ಇಒ ವಿಚಾರದಲ್ಲಿ ನನ್ನನ್ನು ಎ1 ಹಾಗೂ ಆ ವೆಬ್ ಮಾಧ್ಯದವರನ್ನು ಎ2 ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಕುಟುಂಬದವರು ಹಾಗೂ ಮಾಧ್ಯಮದವರು ನನ್ನನ್ನು ಸಂಪರ್ಕಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಪಹಣಿ ಪ್ರಿಂಟ್ ತೆಗದುಕೊಡುತ್ತೇನೆ. ರಾಜಕಾರಣಕ್ಕಾಗಿ ರೈತರ ಭೂಮಿಯನ್ನು ವಕ್ಫ್ ಮಂಡಳಿಗೆ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದರು.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

20 minutes ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

52 minutes ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

1 hour ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

3 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

4 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

17 hours ago