ಹುಬ್ಬಳ್ಳಿ: ಪ್ರಿಯಾಂಕ ಖರ್ಗೆ ಶಾಸಕರಾದರೂ ಕ್ಷೇತ್ರದಲ್ಲಿ ಅವರಿಗೆ ಯಾವುದೇ ಕೆಲಸವಿಲ್ಲ ಅನ್ನಿಸುತ್ತದೆ. ಹುಡುಕಿ ಹುಡುಕಿ ಎಫ್.ಐ.ಆರ್ ಹಾಕಿಸುವುದೇ ಅವರು ಫುಲ್ ಟೈಮ್ ಕೆಲಸ ಮಾಡಿಕೊಂಡಿದ್ದಾರೆ. ಆದರೆ ಅವರು ಹಾಕಿರುವ ಕೇಸ್ ಗಳನ್ನು ಸುಪ್ರೀಂ ಕೋರ್ಟ್ ಛೀಮಾರಿ ಹಾಕಿ ವಾಪಸ್ ಕಳುಹಿಸುತ್ತದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಪಿಸಿ ಸಮಿತಿ ಹಾವೇರಿ ಭೇಟಿ ನೀಡಿದ ಸಂದರ್ಭದಲ್ಲಿ ರೈತನ ಅಹವಾಲು ಪಡೆದಿದ್ದೆವು. ಅವರ ಜಮೀನಿಗೆ ವಕ್ಫ್ ಮೊಹರು ಹಾಕಲಾಗಿತ್ತು. ಇದರಿಂದ ರೈತ ಸಣ್ಣಪ್ಪ ಎಂಬುವರು ರೈತ ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಕುಟುಂಬದವರು ಹೇಳಿದ್ದರು. ಇದು ಮಾಧ್ಯಮದಲ್ಲಿ ಪ್ರಸಾರ ಆಗಿತ್ತು. ಇದರ ಬಗ್ಗೆ ಎಕ್ಸ್ (ಟ್ವೀಟ್) ಮಾಡಿದ್ದೆ. ಇದನ್ನೇ ಇಟ್ಟುಕೊಂಡು ನನ್ನ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆ ಅವರು ಎಫ್.ಐ.ಆರ್ ಮಾಡಿಸಿದ್ದಾರೆ ಎಂದರು.
ನಾನು ಮಾಡಿದ ಟ್ವೀಟ್ ಗೆ ಹಾವೇರಿ ಎಸ್ಪಿ ಅಕೌಂಟ್ ರೀತಿ ಘಟನೆ ಆಗಿಲ್ಲ ಎಂದು ಮರು ಟ್ವೀಟ್ ಮಾಡಿದ್ದರು. ಕಾನೂನು ವ್ಯವಸ್ಥೆಗೆ ಗೌರವ ಇರುವುದರಿಂದ ಟ್ವೀಟ್ ಡಿಲೀಟ್ ಮಾಡಿದೆ. ಆನಂತರ ನಾನು ಪರಿಶೀಲಿಸಿ ಹಾಕಬೇಕಿತ್ತೇನೋ ಎಂದು ಅದನ್ನು ರೀ ಟ್ವೀಟ್ ಮಾಡಿರುತ್ತೇನೆ. ಇಒ ವಿಚಾರದಲ್ಲಿ ನನ್ನನ್ನು ಎ1 ಹಾಗೂ ಆ ವೆಬ್ ಮಾಧ್ಯದವರನ್ನು ಎ2 ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಕುಟುಂಬದವರು ಹಾಗೂ ಮಾಧ್ಯಮದವರು ನನ್ನನ್ನು ಸಂಪರ್ಕಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಪಹಣಿ ಪ್ರಿಂಟ್ ತೆಗದುಕೊಡುತ್ತೇನೆ. ರಾಜಕಾರಣಕ್ಕಾಗಿ ರೈತರ ಭೂಮಿಯನ್ನು ವಕ್ಫ್ ಮಂಡಳಿಗೆ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…