Featured

ಎಫ್.ಐ.ಆರ್ ಹಾಕಿಸುವುದೇ ಪ್ರಿಯಾಂಕ ಖರ್ಗೆ ಅವರ ಫುಲ್ ಟೈಮ್ ಕೆಲಸ : ತೇಜಸ್ವಿ ಸೂರ್ಯ – vishwanews24

ಎಫ್.ಐ.ಆರ್ ಹಾಕಿಸುವುದೇ ಪ್ರಿಯಾಂಕ ಖರ್ಗೆ ಅವರ ಫುಲ್ ಟೈಮ್ ಕೆಲಸ : ತೇಜಸ್ವಿ ಸೂರ್ಯ

ಹುಬ್ಬಳ್ಳಿ: ಪ್ರಿಯಾಂಕ ಖರ್ಗೆ ಶಾಸಕರಾದರೂ ಕ್ಷೇತ್ರದಲ್ಲಿ ಅವರಿಗೆ ಯಾವುದೇ ಕೆಲಸವಿಲ್ಲ ಅನ್ನಿಸುತ್ತದೆ. ಹುಡುಕಿ ಹುಡುಕಿ ಎಫ್.ಐ.ಆರ್ ಹಾಕಿಸುವುದೇ ಅವರು ಫುಲ್ ಟೈಮ್ ಕೆಲಸ ಮಾಡಿಕೊಂಡಿದ್ದಾರೆ. ಆದರೆ ಅವರು ಹಾಕಿರುವ ಕೇಸ್ ಗಳನ್ನು ಸುಪ್ರೀಂ ಕೋರ್ಟ್ ಛೀಮಾರಿ ಹಾಕಿ ವಾಪಸ್ ಕಳುಹಿಸುತ್ತದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಪಿಸಿ ಸಮಿತಿ ಹಾವೇರಿ ಭೇಟಿ ನೀಡಿದ ಸಂದರ್ಭದಲ್ಲಿ ರೈತನ ಅಹವಾಲು ಪಡೆದಿದ್ದೆವು. ಅವರ ಜಮೀನಿಗೆ ವಕ್ಫ್ ಮೊಹರು ಹಾಕಲಾಗಿತ್ತು. ಇದರಿಂದ ರೈತ ಸಣ್ಣಪ್ಪ ಎಂಬುವರು ರೈತ ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಕುಟುಂಬದವರು ಹೇಳಿದ್ದರು. ಇದು ಮಾಧ್ಯಮದಲ್ಲಿ ಪ್ರಸಾರ ಆಗಿತ್ತು. ಇದರ ಬಗ್ಗೆ ಎಕ್ಸ್ (ಟ್ವೀಟ್) ಮಾಡಿದ್ದೆ. ಇದನ್ನೇ ಇಟ್ಟುಕೊಂಡು ನನ್ನ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆ ಅವರು ಎಫ್.ಐ.ಆರ್ ಮಾಡಿಸಿದ್ದಾರೆ ಎಂದರು.

ನಾನು ಮಾಡಿದ ಟ್ವೀಟ್ ಗೆ ಹಾವೇರಿ ಎಸ್ಪಿ ಅಕೌಂಟ್ ರೀತಿ ಘಟನೆ ಆಗಿಲ್ಲ ಎಂದು ಮರು ಟ್ವೀಟ್ ಮಾಡಿದ್ದರು. ಕಾನೂನು ವ್ಯವಸ್ಥೆಗೆ ಗೌರವ ಇರುವುದರಿಂದ‌ ಟ್ವೀಟ್ ಡಿಲೀಟ್ ಮಾಡಿದೆ. ಆನಂತರ ನಾನು ಪರಿಶೀಲಿಸಿ ಹಾಕಬೇಕಿತ್ತೇನೋ ಎಂದು ಅದನ್ನು ರೀ ಟ್ವೀಟ್ ಮಾಡಿರುತ್ತೇನೆ. ಇಒ ವಿಚಾರದಲ್ಲಿ ನನ್ನನ್ನು ಎ1 ಹಾಗೂ ಆ ವೆಬ್ ಮಾಧ್ಯದವರನ್ನು ಎ2 ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಕುಟುಂಬದವರು ಹಾಗೂ ಮಾಧ್ಯಮದವರು ನನ್ನನ್ನು ಸಂಪರ್ಕಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಪಹಣಿ ಪ್ರಿಂಟ್ ತೆಗದುಕೊಡುತ್ತೇನೆ. ರಾಜಕಾರಣಕ್ಕಾಗಿ ರೈತರ ಭೂಮಿಯನ್ನು ವಕ್ಫ್ ಮಂಡಳಿಗೆ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

23 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago