ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ವತಿಯಿಂದ ಗ್ರಾಮಾಂತರ ಭಾಗಗಳಿಂದ ಕುಂದಾಪುರ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಐದು ದಿನಗಳ ಹಿಂದೆ ( 8-6-2024) ಶಾಸ್ತ್ರಿ ಸರ್ಕಲ್ ನಿಂದ ತಾಲೂಕು ಆಫೀಸಿನ ವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸಿ, ಕುಂದಾಪುರ ತಹಶೀಲ್ದಾರ, ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಸೇರಿದಂತೆ, ಕುಂದಾಪುರ ಮತ್ತು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಿಗೆ ಆಗ್ರಹವನ್ನು ಇರಿಸಿ ಎಚ್ಚರಿಸಿದರು ಇದರ ಪರಿಣಾಮ ಮೊದಲ ಹಂತದಲ್ಲಿ ಎಬಿವಿಪಿ ಬೇಡಿಕೆಯಂತೆ ಆಜ್ರಿಯಿಂದ ಕುಂದಾಪುರಕ್ಕೆ ಬಸ್ ಬಿಟ್ಟಿರುವುದು ಶ್ಲಾಘನೀಯ.
ಈಗಾಗಲೇ ಆಜ್ರಿಯಿಂದ ನೇರಳಕಟ್ಟೆ ತಲ್ಲೂರು ಮಾರ್ಗವಾಗಿ ಕುಂದಾಪುರಕ್ಕೆ ಮಾಡಿದ ಬಸ್ ವ್ಯವಸ್ಥೆಯಿಂದಾಗಿ ಕೇವಲ ವಿದ್ಯಾರ್ಥಿಗಳಿಗಲ್ಲದೆ ಸಾರ್ವಜನಿಕರಿಗೂ ಸಹಾಯಕವಾಗಿದೆ. ಅನೇಕ ಸಮಯದಿಂದ ಈ ಮಾರ್ಗಕ್ಕೆ ಬಸ್ ನ ಬೇಡಿಕೆ ಇದ್ದರೂ ಅಧಿಕಾರಿಗಳಿಗೆ ವಿವಿಧ ರೀತಿಯಲ್ಲಿ ಮನವಿ ಸಲ್ಲಿಸಿದರೂ ಸಮರ್ಪಕ ಬಸ್ ವ್ಯವಸ್ಥೆ ಮಾಡದ ಅಧಿಕಾರಿಗಳು ಹೋರಾಟ ನಡೆಸಿದ ಐದು ದಿನಗಳ ಒಳಗೆ ಬಸ್ ಬಿಟ್ಟಿರುವುದು ವಿದ್ಯಾರ್ಥಿಗಳ ಧ್ವನಿಯ ಬೆಲೆಯನ್ನು ಸಾರುತ್ತದೆ.
ಇನ್ನು ಸುಮಾರು 15 ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಸ್ ವ್ಯವಸ್ಥೆ ಮಾಡುವ ಅವಶ್ಯಕತೆ ಇದ್ದು ಆದಷ್ಟು ಬೇಗ ಇದು ಆಗುವಂತೆ ಮಾರ್ಗದ ಅವಶ್ಯಕತೆಯ ಕುರಿತು ಈಗಾಗಲೇ ಎಬಿವಿಪಿ ವಿದ್ಯಾರ್ಥಿಗಳ ಆಗ್ರಹದ ಧ್ವನಿಯಾಗಿ ಅಧಿಕಾರಿಗಳೊಂದಿಗೆ ಚರ್ಚಿಸುತ್ತಿದೆ ಮತ್ತು ಮುಂದೆ ಬರುವ 15 ದಿನಗಳ ವೊಳಗೆ ಎಲ್ಲಾ ಮಾರ್ಗಗಳಿಗೆ ಬಸ್ ವ್ಯವಸ್ಥೆ ಆಗುವ ಭರವಸೆಯೂ ಇದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…