ಉಡುಪಿ

ಎರಡನೇ ದಿನವೂ ಮುಂದುವರಿದ ಮುನಿಯಾಲ್ ಬೆಂಬಲಿಗರ ಪ್ರತಿಭಟನೆ, ಬೆಂಬಲಿಗರನ್ನು ಸಮಾಧಾನ ಪಡಿಸಲು ಉದಯ್ ಶೆಟ್ಟಿ ಹರಸಾಹಸ

Udupi – ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮುನಿಯಾಲು ಉದಯ ಕುಮಾರ್ ಶೆಟ್ಟಿಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಬೆಂಬಲಿಗರಿಂದ ಎರಡನೇ ದಿನವೂ ಮುಂದುವರೆಯಿತು. ನಿನ್ನೆ ಕಾರ್ಕಳದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಟಿಕೆಟ್ ಕೈತಪ್ಪಲು ಕಾರಣರಾದ ಮಾಜಿ ಸಚಿವ ವೀರಪ್ಪ ಮೊಯ್ಲಿ ಹಾಗೂ ಜೆಎ ಭಾವ ವಿರುದ್ದ ಆಕ್ರೋಶ ಹೊರಹಾಕಿದ ಕಾರ್ಯಕರ್ತರು ಮೊಯ್ಲಿ ಹಾಗೂ ಭಾವ ಅವರ ಅಣುಕು ಶವಯಾತ್ರೆ ನಡೆಸಿ ಪ್ರತಿಕೃತಿ ದಹನ ನಡೆಸಿದ್ರು ಆದರೆ ಇಂದು ಕೂಡ ಪ್ರತಿಭಟನೆ ಕಾವು ಮುಂದುವರೆದು, ಹೆಬ್ರಿಯ ಕಾಂಗ್ರೆಸ್ ಕಚೇರಿ ಎದುರು ಕಾರ್ಯಕರ್ತರು,ಬೆಂಬಲಿಗರು ಪ್ರತಿಭಟನೆ ಉದ್ವಿಗ್ನಗೊಂಡು ಓರ್ವ ಉದಯಕುಮಾರ್ ಅವರ ಬೆಂಬಲಿಗ ಮುರತಂಗಡಿಯ ಆಸೀಫ್ ಮೈಮೇಲೆ ಸೀಮೆಎಣ್ಣೆ ಸುರಿದು ಆತ್ಮಹತ್ಯೆಗೂ ಯತ್ನಿಸಿದ್ರು. ಈ ವೇಳೆ ಮಾಜಿ ಸಚಿವ ವೀರಪ್ಪ ಮೊಯಿಲಿ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ದಿಕ್ಕಾರ ಕೂಗಲಾಯಿತು. ಇನ್ನು ಇದೇ ಸಂಧರ್ಭದಲ್ಲಿ ಆಕ್ರೋಶ ಹೊರಹಾಕಿದ ಕಾರ್ಯಕರ್ತರು ಕಾರ್ಕಳದಲ್ಲಿ ಉದಯ ಕುಮಾರ್ ಶೆಟ್ಟಿಗೆ ಟೀಕೇಟ್ ನೀಡಬೇಕು ತಪ್ಪಿದ್ದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಕಾಂಗ್ರೆಸ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಮುನಿಯಾಲು ಉದಯ ಕುಮಾರ್ ಶೆಟ್ಟಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ ಯಾರೂ ಪ್ರತಿಭಟನೆ ಮಾಡಬಾರದು, ಧೈರ್ಯದಿಂದಿರಿನನಗೆ ಭರವಸೆ ಇದೆ. ನಮ್ಮ ನಾಯಕರಾದ ವೀರಪ್ಪ ಮೊಯಿಲಿ ಮತ್ತು ಗೋಪಾಲ ಭಂಡಾರಿಯವರು ನನಗೆ ಸೀಟನ್ನು ಕೊನೆಯ ಕ್ಷಣದಲ್ಲಿ ಬಿಟ್ಟು ಕೊಡುತ್ತಾರೆ. ಕಾರ್ಕಳದಲ್ಲಿ ಕಾಂಗ್ರೆಸ್ ಶಾಸಕರನ್ನು ನಾವು ಕಾಣಬೇಕಾಗಿದೆ ಎಂದು ಕಾರ್ಯಕರ್ತರನ್ನು ಸಮಾಧಾನಪಡಿಸಿದ್ರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

4 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

4 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

24 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago