ಉಡುಪಿ

ಎರಡನೇ ದಿನವೂ ಮುಂದುವರಿದ ಮುನಿಯಾಲ್ ಬೆಂಬಲಿಗರ ಪ್ರತಿಭಟನೆ, ಬೆಂಬಲಿಗರನ್ನು ಸಮಾಧಾನ ಪಡಿಸಲು ಉದಯ್ ಶೆಟ್ಟಿ ಹರಸಾಹಸ

Udupi – ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮುನಿಯಾಲು ಉದಯ ಕುಮಾರ್ ಶೆಟ್ಟಿಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಬೆಂಬಲಿಗರಿಂದ ಎರಡನೇ ದಿನವೂ ಮುಂದುವರೆಯಿತು. ನಿನ್ನೆ ಕಾರ್ಕಳದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಟಿಕೆಟ್ ಕೈತಪ್ಪಲು ಕಾರಣರಾದ ಮಾಜಿ ಸಚಿವ ವೀರಪ್ಪ ಮೊಯ್ಲಿ ಹಾಗೂ ಜೆಎ ಭಾವ ವಿರುದ್ದ ಆಕ್ರೋಶ ಹೊರಹಾಕಿದ ಕಾರ್ಯಕರ್ತರು ಮೊಯ್ಲಿ ಹಾಗೂ ಭಾವ ಅವರ ಅಣುಕು ಶವಯಾತ್ರೆ ನಡೆಸಿ ಪ್ರತಿಕೃತಿ ದಹನ ನಡೆಸಿದ್ರು ಆದರೆ ಇಂದು ಕೂಡ ಪ್ರತಿಭಟನೆ ಕಾವು ಮುಂದುವರೆದು, ಹೆಬ್ರಿಯ ಕಾಂಗ್ರೆಸ್ ಕಚೇರಿ ಎದುರು ಕಾರ್ಯಕರ್ತರು,ಬೆಂಬಲಿಗರು ಪ್ರತಿಭಟನೆ ಉದ್ವಿಗ್ನಗೊಂಡು ಓರ್ವ ಉದಯಕುಮಾರ್ ಅವರ ಬೆಂಬಲಿಗ ಮುರತಂಗಡಿಯ ಆಸೀಫ್ ಮೈಮೇಲೆ ಸೀಮೆಎಣ್ಣೆ ಸುರಿದು ಆತ್ಮಹತ್ಯೆಗೂ ಯತ್ನಿಸಿದ್ರು. ಈ ವೇಳೆ ಮಾಜಿ ಸಚಿವ ವೀರಪ್ಪ ಮೊಯಿಲಿ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ದಿಕ್ಕಾರ ಕೂಗಲಾಯಿತು. ಇನ್ನು ಇದೇ ಸಂಧರ್ಭದಲ್ಲಿ ಆಕ್ರೋಶ ಹೊರಹಾಕಿದ ಕಾರ್ಯಕರ್ತರು ಕಾರ್ಕಳದಲ್ಲಿ ಉದಯ ಕುಮಾರ್ ಶೆಟ್ಟಿಗೆ ಟೀಕೇಟ್ ನೀಡಬೇಕು ತಪ್ಪಿದ್ದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಕಾಂಗ್ರೆಸ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಮುನಿಯಾಲು ಉದಯ ಕುಮಾರ್ ಶೆಟ್ಟಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ ಯಾರೂ ಪ್ರತಿಭಟನೆ ಮಾಡಬಾರದು, ಧೈರ್ಯದಿಂದಿರಿನನಗೆ ಭರವಸೆ ಇದೆ. ನಮ್ಮ ನಾಯಕರಾದ ವೀರಪ್ಪ ಮೊಯಿಲಿ ಮತ್ತು ಗೋಪಾಲ ಭಂಡಾರಿಯವರು ನನಗೆ ಸೀಟನ್ನು ಕೊನೆಯ ಕ್ಷಣದಲ್ಲಿ ಬಿಟ್ಟು ಕೊಡುತ್ತಾರೆ. ಕಾರ್ಕಳದಲ್ಲಿ ಕಾಂಗ್ರೆಸ್ ಶಾಸಕರನ್ನು ನಾವು ಕಾಣಬೇಕಾಗಿದೆ ಎಂದು ಕಾರ್ಯಕರ್ತರನ್ನು ಸಮಾಧಾನಪಡಿಸಿದ್ರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago