Featured

ಎರಡು ದಿನಗಳ ಕಾಂಗ್ರೆಸ್ “ರಾಜ್ಯ ಚಿಂತನ ಶಿಬಿರ”ಕ್ಕೆ ಚಾಲನೆ – ಇದೊಂದು ಐತಿಹಾಸಿಕ ಕಾರ್ಯಕ್ರಮ : ಡಿಕೆಶಿ – Vishwanews24

ಎಲ್ಲಾ ವರ್ಗದ ಜನರ ಸೇವೆಗೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು..

ಉತ್ತಮ ಆಡಳಿತ ನೀಡುವ ಸರ್ಕಾರ ರಚಿಸಬೇಕು..

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ಹೊರವಲಯದ ಕ್ಲಾರ್ಕ್ ಎಕ್ಸಾಟಿಕದಲ್ಲಿ ಇಂದಿನಿಂದ ಆರಂಭವಾದ ಎರಡು ದಿನಗಳ ಕಾಂಗ್ರೆಸ್ “ರಾಜ್ಯ ಚಿಂತನ ಶಿಬಿರ”ದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಚಾಲನೆ ನೀಡಿದರು

ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಾನು ಪಕ್ಷದ ಅಧ್ಯಕ್ಷನಾಗಿ ಜವಾಬ್ದಾರಿ ತೆಗೆದುಕೊಂಡಾಗ, ‘ಜತೆಗೂಡುವುದು ಆರಂಭ, ಜತೆಗೂಡಿ ಯೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು’ ಎಂದು ಹೇಳಿದ್ದೆ. ಈ ಚಿಂತನ ಮಂಥನ ಶಿಬಿರವನ್ನು 7-8 ತಿಂಗಳ ಹಿಂದೆಯಾ ನಡೆಸಲು ಯೋಚಿಸಿದ್ದೆವು. ಉಪಚುನಾವಣೆ, ಹೋರಾಟ, ಅಧಿವೇಶನ, ದೆಹಲಿ ಕಾರ್ಯಕ್ರಮ ಮತ್ತಿತರ ಕಾರಣಗಳಿಂದ ನಾಲ್ಕು ಬಾರಿ ಮುಂದೂಡಲಾಗಿತ್ತು. ಕೊಡಗು, ಹುಬ್ಬಳ್ಳಿ, ಮಂಗಳೂರಿನಲ್ಲಿ ಮಾಡಲು ನಿರ್ಧರಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಎಐಸಿಸಿ ಕೊಟ್ಟಿರುವ ಸೂಚನೆ, ಮಾರ್ಗದರ್ಶನದ ಪ್ರಕಾರ ನಾನು ಈ ಸಭೆ ಮಾಡುತ್ತಿದ್ದೇವೆ. ಅವರ ಸೂಚನೆಯಂತೆ ಆರು ಸಮಿತಿಗಳನ್ನು ರಚಿಸಲಾಗಿದೆ ಎಂದರು.

ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಯಾವ ದಿಕ್ಕಿನಲ್ಲಿ ಹೋಗಬೇಕು, ಯಾವ ರೀತಿ ಹೋರಾಟ ಮಾಡಬೇಕು ಎಂದು ಉದಯಪುರ ನವಸಂಕಲ್ಪ ಶಿಬಿರದಲ್ಲಿ ತೀರ್ಮಾನ ಮಾಡಲಾಗಿದೆ.ಕಾರ್ಯಾಧ್ಯಕ್ಷರಿದ್ದರೂ ಸಮಿತಿಗಳಿಗೆ ಬೇರೆ ನಾಯಕರನ್ನು ಅಧ್ಯಕ್ಷರನ್ನಾಗಿ ಮಾಡಿದ್ದು, ಉದಯಪುರ ಸಭೆಯಲ್ಲಿ ಭಾಗವಹಿಸಿದ್ದವರಿಗೆ ಅವಕಾಶ ನೀಡಲಾಗಿದೆ. ಎಲ್ಲಾ ಸಮಿತಿಗಳು ನಿನ್ನೆ, ಮೊನ್ನೆ ಚರ್ಚೆ ಮಾಡಿ ಸಲಹೆಗಳ ಪಟ್ಟಿ ಮಾಡಿದ್ದು, ಇಂದು ಆ ಬಗ್ಗೆ ಚರ್ಚಿಸಲಾಗುವುದು. ಈ ಸಮಿತಿಗಳಲ್ಲಿ ಇಲ್ಲದ, ಸಲಹೆ ನೀಡಲು ಬಯಸುವವರು ಅದನ್ನು ಲಿಖಿತ ರೂಪದಲ್ಲಿ ನೀಡಬಹುದು. ಅಮೂಲ್ಯ ಸಲಹೆಗಳನ್ನು ಸೇರ್ಪಡೆ ಮಾಡಿಕೊಂಡು ಚರ್ಚಿಸಲಾಗುವುದು. ನಿಮ್ಮ ಸಲಹೆ ರಾಜ್ಯ ಹಾಗೂ ದೇಶದ ಭವಿಷ್ಯ, ಪಕ್ಷದ ಬಲವರ್ಧನೆ, 2023 ಹಾಗೂ 2024 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಇರಲಿ ಎಂದು ಹೇಳಿದರು.

ರಾಜ್ಯದಲ್ಲಿ 78 ಲಕ್ಷ ಸದಸ್ಯರನ್ನು ನೋಂದಣಿ ಮಾಡಲಾಗಿದ್ದು, ಅದರಲ್ಲಿ ಶೇ.42 ರಷ್ಟು ಮಂದಿ 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರು, ಶೇ.42 ರಷ್ಟು ಮಂದಿ ಮಹಿಳೆಯರು. ಸದಸ್ಯತ್ವ ನೋಂದಣಿ ಮುಂದುವರಿಯಲಿದ್ದು, ಬೂತ್ ಮಟ್ಟದ ಸಮಿತಿ ಸೇರಿ ಎಲ್ಲ ಸಮಿತಿಗಳನ್ನು ರಚಿಸಲು ಕಾಲಮಿತಿ ನಿಗದಿ ಮಾಡಲಾಗಿದೆ. ಪ್ರತಿ ಜಿಲ್ಲೆಯಲ್ಲಿ ಆಗಸ್ಟ್ 9 ರಿಂದ ಆಗಸ್ಟ್ 15 ರ ವರೆಗೆ ಜಿಲ್ಲಾ ಮಟ್ಟದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲು ರಾಷ್ಟ್ರ ನಾಯಕರು ಸೂಚಿಸಿದ್ದಾರೆ. ಯುವಕರು, ವಿದ್ಯಾರ್ಥಿಗಳು, ಎಲ್ಲಾ ವರ್ಗದವರನ್ನು ಸೇರಿಸಿಕೊಂಡು ಸರಕಾರದ ವೈಫಲ್ಯಗಳ ವಿರುದ್ಧ ದೊಡ್ಡ ಹೋರಾಟ ಮಾಡಬೇಕಾಗಿದೆ. ನಿಮ್ಮ ಕ್ಷೇತ್ರ, ಜಿಲ್ಲೆ ಹಾಗೂ ರಾಜ್ಯಕ್ಕೆ ಪ್ರತ್ಯೇಕ ಪ್ರಣಾಳಿಕೆ ಮಾಡಬೇಕು. ಕರಾವಳಿ, ಮಲೆನಾಡು, ಬೆಂಗಳೂರು, ಕಲ್ಯಾಣ ಕರ್ನಾಟಕ ಸೇರಿದಂತೆ ಎಲ್ಲಾ ವಲಯಕ್ಕೆ ಪ್ರತ್ಯೇಕ ಕಾರ್ಯಕ್ರಮ ರೂಪಿಸಬೇಕು. ಎಲ್ಲಾ ವರ್ಗದ ಜನರ ಸೇವೆಗೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು. ಉತ್ತಮ ಆಡಳಿತ ನೀಡುವ ಸರ್ಕಾರ ರಚಿಸಬೇಕು ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಧ್ರುವನಾರಾಯಣ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

5 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

5 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

5 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

5 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

5 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago