ಹೊಸದಿಲ್ಲಿ,: ಬ್ಯಾಂಕ್ಗಳ ವಿಲೀನ ವೇತನ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರೆ ನೀಡಲಾಗಿದ್ದ 48 ಗಂಟೆಗಳ ಬ್ಯಾಂಕ್ ನೌಕರರ ಮುಷ್ಕರವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸರಕಾರದ ಬ್ಯಾಂಕ್ ವಿಲೀನ ಘೋಷಣೆಗೆ ಸಂಬಂಧಿಸಿದ ತಮ್ಮ ಕಳವಳ ಬಗೆಹರಿಸಲು ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್ಗಳ ಅಧಿಕಾರಿಗಳ ಸಂಘಟನೆಗಳು ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ನೀಡಿದ್ದ ಮುಷ್ಕರದ ಕರೆಯನ್ನು ಮುಂದೂಡಿವೆ.
ಹೊಸದಿಲ್ಲಿಯಲ್ಲಿ ರಾಜೀವ್ ಕುಮಾರ್ ಅವರನ್ನು ಭೇಟಿಯಾಗಿರುವ ನಾಲ್ಕು ಬ್ಯಾಂಕ್ ಯೂನಿಯನ್ಗಳ ಸಂಘಟನೆಗಳ ಪ್ರತಿನಿಧಿಗಳು ಮುಷ್ಕರ ಹಿಂಪಡೆದಿರುವುದಾಗಿ ಹೇಳಿಕೆ ನೀಡಿದ್ದಾರೆ.
”ಹಣಕಾಸು ಕಾರ್ಯದರ್ಶಿಯ ಸಕಾರಾತ್ಮಕ ಹಾಗೂ ಕಾರ್ಯ ಸಾಧುವಾದ ಪರಿಹಾರವನ್ನು ಪರಿಗಣನೆಗೆ ತೆಗೆದುಕೊಂಡು 48 ಗಂಟೆಗಳ ಕಾಲ ಕರೆ ನೀಡಿದ್ದ ಮುಷ್ಕರವನ್ನು ಮುಂದೂಡಲು ನಿರ್ಧರಿಸಲಾಗಿದೆ” ಎಂದು ನಾಲ್ಕು ಬ್ಯಾಂಕ್ ಯೂನಿಯನ್ಗಳು ತಿಳಿಸಿವೆ.
ಎಲ್ಲ ಬ್ಯಾಂಕ್ಗಳ ಗುರುತನ್ನು ಕಾಪಾಡುವುದು ಸೇರಿದಂತೆ ಉದ್ದೇಶಿತ 10 ಬ್ಯಾಂಕ್ಗಳ ವಿಲೀನದಿಂದಾಗಿ ಉಂಟಾಗುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಸಂಬಂಧಪಟ್ಟ ಎಲ್ಲರನ್ನೂ ಒಳಗೊಂಡ ಸಮಿತಿಯನ್ನು ರಚಿಸುವ ಕುರಿತಂತೆ ರಾಜೀವ್ ಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ .ಚರ್ಚೆಗಳ ದೃಷ್ಟಿಯಿಂದ ಬ್ಯಾಂಕ್ಗಳ ಮುಷ್ಕರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಲಾಗಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…