ಹೊಸದಿಲ್ಲಿ,: ಬ್ಯಾಂಕ್ಗಳ ವಿಲೀನ ವೇತನ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರೆ ನೀಡಲಾಗಿದ್ದ 48 ಗಂಟೆಗಳ ಬ್ಯಾಂಕ್ ನೌಕರರ ಮುಷ್ಕರವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸರಕಾರದ ಬ್ಯಾಂಕ್ ವಿಲೀನ ಘೋಷಣೆಗೆ ಸಂಬಂಧಿಸಿದ ತಮ್ಮ ಕಳವಳ ಬಗೆಹರಿಸಲು ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್ಗಳ ಅಧಿಕಾರಿಗಳ ಸಂಘಟನೆಗಳು ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ನೀಡಿದ್ದ ಮುಷ್ಕರದ ಕರೆಯನ್ನು ಮುಂದೂಡಿವೆ.
ಹೊಸದಿಲ್ಲಿಯಲ್ಲಿ ರಾಜೀವ್ ಕುಮಾರ್ ಅವರನ್ನು ಭೇಟಿಯಾಗಿರುವ ನಾಲ್ಕು ಬ್ಯಾಂಕ್ ಯೂನಿಯನ್ಗಳ ಸಂಘಟನೆಗಳ ಪ್ರತಿನಿಧಿಗಳು ಮುಷ್ಕರ ಹಿಂಪಡೆದಿರುವುದಾಗಿ ಹೇಳಿಕೆ ನೀಡಿದ್ದಾರೆ.
”ಹಣಕಾಸು ಕಾರ್ಯದರ್ಶಿಯ ಸಕಾರಾತ್ಮಕ ಹಾಗೂ ಕಾರ್ಯ ಸಾಧುವಾದ ಪರಿಹಾರವನ್ನು ಪರಿಗಣನೆಗೆ ತೆಗೆದುಕೊಂಡು 48 ಗಂಟೆಗಳ ಕಾಲ ಕರೆ ನೀಡಿದ್ದ ಮುಷ್ಕರವನ್ನು ಮುಂದೂಡಲು ನಿರ್ಧರಿಸಲಾಗಿದೆ” ಎಂದು ನಾಲ್ಕು ಬ್ಯಾಂಕ್ ಯೂನಿಯನ್ಗಳು ತಿಳಿಸಿವೆ.
ಎಲ್ಲ ಬ್ಯಾಂಕ್ಗಳ ಗುರುತನ್ನು ಕಾಪಾಡುವುದು ಸೇರಿದಂತೆ ಉದ್ದೇಶಿತ 10 ಬ್ಯಾಂಕ್ಗಳ ವಿಲೀನದಿಂದಾಗಿ ಉಂಟಾಗುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಸಂಬಂಧಪಟ್ಟ ಎಲ್ಲರನ್ನೂ ಒಳಗೊಂಡ ಸಮಿತಿಯನ್ನು ರಚಿಸುವ ಕುರಿತಂತೆ ರಾಜೀವ್ ಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ .ಚರ್ಚೆಗಳ ದೃಷ್ಟಿಯಿಂದ ಬ್ಯಾಂಕ್ಗಳ ಮುಷ್ಕರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಲಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…