Featured

ಎರಡು ರಾಷ್ಟ್ರೀಯ ಪಕ್ಷಗಳನ್ನು ಹೊರ ಹಾಕಲು ಕನ್ನಡಿಗರು ನನಗೆ  ಸುಪಾರಿ ಕೊಟ್ಟಿದ್ದಾರೆ : ಹೆಚ್.ಡಿ.ಕೆ – Vishwanews24

ಎರಡು ರಾಷ್ಟ್ರೀಯ ಪಕ್ಷಗಳನ್ನು ಹೊರ ಹಾಕಲು ಕನ್ನಡಿಗರು ನನಗೆ  ಸುಪಾರಿ ಕೊಟ್ಟಿದ್ದಾರೆ : ಹೆಚ್.ಡಿ.ಕೆ

ಬೆಂಗಳೂರು: “ಎರಡು ರಾಷ್ಟ್ರೀಯ ಪಕ್ಷಗಳನ್ನು ಕರ್ನಾಟಕದಿಂದ ಹೊರ ಹಾಕುವಂತೆ ಕನ್ನಡಿಗರು ನನಗೆ ಸುಪಾರಿ ಕೊಟ್ಟಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಬೆಲೆ ಏರಿಕೆ ವಿರುದ್ಧ ಜೆಡಿಎಸ್ ಪಕ್ಷವು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷದ ಬಗ್ಗೆ ಟೀಕಿಸಲು, ಬಿಜೆಪಿ ನಾಯಕರು ನನಗೆ ಸುಪಾರಿ ಕೊಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ನನಗೆ ಸುಪಾರಿ ನೀಡಿರುವುದು ಬಿಜೆಪಿಯವರಲ್ಲ, ಕನ್ನಡಿಗರು. ಎರಡು ರಾಷ್ಟ್ರೀಯ ಪಕ್ಷಗಳನ್ನು ಹೊರ ಹಾಕಲು ಕನ್ನಡಿಗರು ಸುಪಾರಿ ಕೊಟ್ಟಿದ್ದಾರೆ. ನೀರಾವರಿ ಯೋಜನೆಗಳ ಬಗ್ಗೆ ಮಾತನಾಡೋದಕ್ಕೆ ಸುಪಾರಿ ಕೊಟ್ಟಿದ್ದಾರೆ” ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.


“ಭಾರತೀಯ ಜನತಾ ಪಾರ್ಟಿಯೂ ಅಧಿಕಾರಕ್ಕೆ ಬರಲು, ಬಿಜೆಪಿ ನಾಯಕರು ಎಷ್ಟು ಕಾರಣವೋ, ಕಾಂಗ್ರೆಸ್ ನಾಯಕರು ಅಷ್ಟೇ ಕಾರಣ. ಅಪಮಾರ್ಗದ ಮೂಲಕ ನನ್ನ ನೇತೃತ್ವದ ಮೈತ್ರಿ ಸರ್ಕಾರವನ್ನು ಉರುಳಿಸಿ ಅದೇ ರೀತಿಯ ಅಪಮಾರ್ಗದ ಮೂಲಕ ಬಿಜೆಪಿ ಸರ್ಕಾರ ಅದಿಕಾರಕ್ಕೆ ಬಂತು. ಆದರೆ ಇಂದು ಬಿಜೆಪಿ ಸರ್ಕಾರವನ್ನು ಕೈ ನಾಯಕರು ಅನೈತಿಕ ಸರ್ಕಾರ ಎಂದು ಹೇಳುತ್ತಿದ್ದಾರೆ. ಇದನ್ನು ರಾಜ್ಯದ ಜನರು ಗಮನಿಸಬೇಕು” ಎಂದು ರಾಜ್ಯ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

17 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago