Featured

ಎರಡು ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯುವ ಶಕ್ತಿ ಜೆಡಿಎಸ್‍ಗೆ ಇದೆ, ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಛಲ ತೊಟ್ಟಿದ್ದೇವೆ : ರೇವಣ್ಣ -Vishwanews24

ಹಾಸನ: ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಛಲ ತೊಟ್ಟಿದ್ದೇವೆ. ಈ ರಾಜ್ಯದಲ್ಲಿ ರೈತರು ಉಳಿಯಬೇಕು. ಅದಕ್ಕಾಗಿ ಮತ್ತೊಮ್ಮೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲೇಬೇಕು,  ಕುಮಾರಸ್ವಾಮಿ ಗೌರವದಿಂದ ಇರಬೇಕು. ರಾಜಕೀಯ ಶಾಶ್ವತವಲ್ಲದ ಕಾರಣ ಕೆಲವೊಂದನ್ನು ಬಿಡಬೇಕು. ಅಣ್ಣನಾಗಿ ಈ ಸಲಹೆ ನೀಡುತ್ತಿದ್ದೇನೆ ಎಂದು ರೇವಣ್ಣ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಮಾರಸ್ವಾಮಿ ಕೆಲವು ತಪ್ಪು ಮಾಡಿದ್ದಾರೆ. ಯಾವುದಕ್ಕೂ ಬಾರದವರನ್ನು ಶಾಸಕ, ಮಂತ್ರಿ, ಸಂಸರನ್ನಾಗಿ ಮಾಡಿದ್ದಾರೆ. ಮಾಡಿದ ತಪ್ಪಿಗೆ ಈಗ ಕುಮಾರಸ್ವಾಮಿ ಅನುಭವಿಸುತ್ತಿದ್ದಾರೆ. ಇವೆಲ್ಲ ಎಲ್ಲಿದ್ದವು? ಇವೆಲ್ಲವನ್ನು ನಾನು ಹತ್ತಿರಕ್ಕೆ ಸೇರಿಸಲ್ಲ. ಕುಮಾರಸ್ವಾಮಿಯದ್ದು ಸ್ವಲ್ಪ ದೊಡ್ಡ ಗುಣ, ಆಯ್ಯೋ ಅಂತಾ ಬಂದರೆ ತಥಾಸ್ತು ಅಂದು ಬಿಡುತ್ತಾನೆ. ಆಮೇಲೆ ಅವರೆಲ್ಲರೂ ಕುಮಾರಸ್ವಾಮಿಗೆ ಟೋಪಿ ಹಾಕಿ ಹೋಗುತ್ತಾರೆ ಎಂದು ಜೆಡಿಎಸ್ ಬಿಟ್ಟವರ ವಿರುದ್ಧ ಕಿಡಿಕಾರಿದರು.

ರಾಷ್ಟ್ರೀಯ ಪಕ್ಷಗಳು ಏನೇ ಮಾಡಿದರು ಇದರಲ್ಲಿ ಯಶಸ್ವಿಯಾಗುವುದಿಲ್ಲ. ಇಂತಹ ಅಪಪ್ರಚಾರವನ್ನು ದೇವೇಗೌಡರು, ಕುಮಾರಸ್ವಾಮಿ ತುಂಬಾ ದಿನಗಳಿಂದ ನೋಡಿದ್ದಾರೆ. ಜೆಡಿಎಸ್‍ನ ಮುಗಿಸಲು ಯಾರಿಂದಲೂ ಆಗಲ್ಲ. ಜನತೆ, ದೇವರ ಆಶೀರ್ವಾದ ಇರೋವವರೆಗೂ ಜೆಡಿಎಸ್ ಮುಗಿಸಲು ಸಾಧ್ಯವಿಲ್ಲ. ದೇವೇಗೌಡರು ಇವೆಲ್ಲವನ್ನೂ ಎದುರಿಸಿಯೇ ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗಿದ್ದಾರೆ. ಕಾಲವೇ ಎಲ್ಲವನ್ನೂ ನಿರ್ಧರಿಸುತ್ತದೆ. ಎರಡು ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯುವ ಶಕ್ತಿ ಜೆಡಿಎಸ್‍ಗೆ ಇದೆ. ಜನರೇ ಎರಡು ರಾಷ್ಟ್ರೀಯ ಪಕ್ಷಗಳಿಗೆ ಉಗಿಯುವ ಕಾಲ ಬರಲಿದೆ. ಜೆಡಿಎಸ್ ಕಾರ್ಯಕರ್ತರು ಧೃತಿಗೆಡಬೇಕಿಲ್ಲ. ಜೆಡಿಎಸ್ ಮುಗಿಸಲು ಕಚೇರಿಯನ್ನು ಕಿತ್ತುಕೊಂಡರು. ಈಗ ಒಳ್ಳೆಯ ಕಚೇರಿ ಕಟ್ಟಿಲ್ಲವೇ, ಅಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಸಲಹೆ ನೀಡಿದರು

ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಛಲ ತೊಟ್ಟಿದ್ದೇವೆ. ಈ ರಾಜ್ಯದಲ್ಲಿ ರೈತರು ಉಳಿಯಬೇಕು. ಅದಕ್ಕಾಗಿ ಮತ್ತೊಮ್ಮೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲೇಬೇಕು. ಕುಮಾರಸ್ವಾಮಿ ಸಾಲಮನ್ನಾ ಮಾಡಿರುವ ಹಣವನ್ನೇ ತಡೆಹಿಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ದೇವೇಗೌಡರು ತೀರ್ಮಾನ ಮಾಡುತ್ತಾರೆ. ಕೋಮುವಾದಿ ಪಕ್ಷ ದೂರವಿಡಲು ಒಂದಾಗುವುದಾದರೆ ದೇವೇಗೌಡರು, ಕುಮಾರಸ್ವಾಮಿ ನಿರ್ಧರಿಸುತ್ತಾರೆ. ಎಂದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago