ಹಾಸನ: ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಛಲ ತೊಟ್ಟಿದ್ದೇವೆ. ಈ ರಾಜ್ಯದಲ್ಲಿ ರೈತರು ಉಳಿಯಬೇಕು. ಅದಕ್ಕಾಗಿ ಮತ್ತೊಮ್ಮೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲೇಬೇಕು, ಕುಮಾರಸ್ವಾಮಿ ಗೌರವದಿಂದ ಇರಬೇಕು. ರಾಜಕೀಯ ಶಾಶ್ವತವಲ್ಲದ ಕಾರಣ ಕೆಲವೊಂದನ್ನು ಬಿಡಬೇಕು. ಅಣ್ಣನಾಗಿ ಈ ಸಲಹೆ ನೀಡುತ್ತಿದ್ದೇನೆ ಎಂದು ರೇವಣ್ಣ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಮಾರಸ್ವಾಮಿ ಕೆಲವು ತಪ್ಪು ಮಾಡಿದ್ದಾರೆ. ಯಾವುದಕ್ಕೂ ಬಾರದವರನ್ನು ಶಾಸಕ, ಮಂತ್ರಿ, ಸಂಸರನ್ನಾಗಿ ಮಾಡಿದ್ದಾರೆ. ಮಾಡಿದ ತಪ್ಪಿಗೆ ಈಗ ಕುಮಾರಸ್ವಾಮಿ ಅನುಭವಿಸುತ್ತಿದ್ದಾರೆ. ಇವೆಲ್ಲ ಎಲ್ಲಿದ್ದವು? ಇವೆಲ್ಲವನ್ನು ನಾನು ಹತ್ತಿರಕ್ಕೆ ಸೇರಿಸಲ್ಲ. ಕುಮಾರಸ್ವಾಮಿಯದ್ದು ಸ್ವಲ್ಪ ದೊಡ್ಡ ಗುಣ, ಆಯ್ಯೋ ಅಂತಾ ಬಂದರೆ ತಥಾಸ್ತು ಅಂದು ಬಿಡುತ್ತಾನೆ. ಆಮೇಲೆ ಅವರೆಲ್ಲರೂ ಕುಮಾರಸ್ವಾಮಿಗೆ ಟೋಪಿ ಹಾಕಿ ಹೋಗುತ್ತಾರೆ ಎಂದು ಜೆಡಿಎಸ್ ಬಿಟ್ಟವರ ವಿರುದ್ಧ ಕಿಡಿಕಾರಿದರು.
ರಾಷ್ಟ್ರೀಯ ಪಕ್ಷಗಳು ಏನೇ ಮಾಡಿದರು ಇದರಲ್ಲಿ ಯಶಸ್ವಿಯಾಗುವುದಿಲ್ಲ. ಇಂತಹ ಅಪಪ್ರಚಾರವನ್ನು ದೇವೇಗೌಡರು, ಕುಮಾರಸ್ವಾಮಿ ತುಂಬಾ ದಿನಗಳಿಂದ ನೋಡಿದ್ದಾರೆ. ಜೆಡಿಎಸ್ನ ಮುಗಿಸಲು ಯಾರಿಂದಲೂ ಆಗಲ್ಲ. ಜನತೆ, ದೇವರ ಆಶೀರ್ವಾದ ಇರೋವವರೆಗೂ ಜೆಡಿಎಸ್ ಮುಗಿಸಲು ಸಾಧ್ಯವಿಲ್ಲ. ದೇವೇಗೌಡರು ಇವೆಲ್ಲವನ್ನೂ ಎದುರಿಸಿಯೇ ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗಿದ್ದಾರೆ. ಕಾಲವೇ ಎಲ್ಲವನ್ನೂ ನಿರ್ಧರಿಸುತ್ತದೆ. ಎರಡು ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯುವ ಶಕ್ತಿ ಜೆಡಿಎಸ್ಗೆ ಇದೆ. ಜನರೇ ಎರಡು ರಾಷ್ಟ್ರೀಯ ಪಕ್ಷಗಳಿಗೆ ಉಗಿಯುವ ಕಾಲ ಬರಲಿದೆ. ಜೆಡಿಎಸ್ ಕಾರ್ಯಕರ್ತರು ಧೃತಿಗೆಡಬೇಕಿಲ್ಲ. ಜೆಡಿಎಸ್ ಮುಗಿಸಲು ಕಚೇರಿಯನ್ನು ಕಿತ್ತುಕೊಂಡರು. ಈಗ ಒಳ್ಳೆಯ ಕಚೇರಿ ಕಟ್ಟಿಲ್ಲವೇ, ಅಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಸಲಹೆ ನೀಡಿದರು
ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಛಲ ತೊಟ್ಟಿದ್ದೇವೆ. ಈ ರಾಜ್ಯದಲ್ಲಿ ರೈತರು ಉಳಿಯಬೇಕು. ಅದಕ್ಕಾಗಿ ಮತ್ತೊಮ್ಮೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲೇಬೇಕು. ಕುಮಾರಸ್ವಾಮಿ ಸಾಲಮನ್ನಾ ಮಾಡಿರುವ ಹಣವನ್ನೇ ತಡೆಹಿಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ದೇವೇಗೌಡರು ತೀರ್ಮಾನ ಮಾಡುತ್ತಾರೆ. ಕೋಮುವಾದಿ ಪಕ್ಷ ದೂರವಿಡಲು ಒಂದಾಗುವುದಾದರೆ ದೇವೇಗೌಡರು, ಕುಮಾರಸ್ವಾಮಿ ನಿರ್ಧರಿಸುತ್ತಾರೆ. ಎಂದರು.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…