Featured

ಎರಡು ವರ್ಷಗಳಿಂದ ನಿಮಗೆ ಟೋಪಿ ಹಾಕುತ್ತಿರುವ ಬಿಜೆಪಿಗೆ ಈಗ ನೀವು ಟೋಪಿ ಹಾಕಬೇಕು : ಡಿ.ಕೆ. ಶಿ – Vishwanews24

ಎರಡು ವರ್ಷಗಳಿಂದ ನಿಮಗೆ ಟೋಪಿ ಹಾಕುತ್ತಿರುವ ಬಿಜೆಪಿಗೆ ಈಗ ನೀವು ಟೋಪಿ ಹಾಕಬೇಕು : ಡಿ.ಕೆ. ಶಿ – Vishwanews24

ಹಾನಗಲ್‌:  ಎರಡು ವರ್ಷಗಳಿಂದ ನಿಮಗೆ ಟೋಪಿ ಹಾಕುತ್ತಿರುವ ಬಿಜೆಪಿಗೆ ಈಗ ನೀವು ಟೋಪಿ ಹಾಕಬೇಕು. ಕೇಂದ್ರ, ರಾಜ್ಯದಲ್ಲಿ ಡಬಲ್‌ ಎಂಜಿನ್‌ ಸರ್ಕಾರ ತಂದರೆ ಇಂದ್ರ-ಚಂದ್ರನನ್ನು ತೋರಿಸುವುದಾಗಿ ಹೇಳಿ ಜನರಿಗೆ ಟೋಪಿ ಹಾಕಿದ ಬಿಜೆಪಿಗೆ ಈಗ ಜನ ಟೋಪಿ ಹಾಕಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದ್ದಾರೆ.

ಹಾನಗಲ್‌ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಶ್ರೀನಿವಾಸ ಮಾನೆ ಪರ ಪ್ರಚಾರ ಕೈಗೊಂಡ ಅವರು, ಬಿಜೆಪಿಯವರು ಯಾವ ಕಾರಣಕ್ಕೆ ತಮಗೆ ಮತ ನೀಡಿ ಎಂದು ಕೇಳುತ್ತಿದ್ದಾರೋ ನನಗೆ ಅರ್ಥವಾಗುತ್ತಿಲ್ಲ. ಯಾಕೆ ಮತಹಾಕಬೇಕು ಎಂದು ಅವರೇ ಹೇಳಬೇಕು. ಅದನ್ನು ಬಿಟ್ಟು ಸಿದ್ದರಾಮಯ್ಯ ರಾಹುಲ್‌ ಗಾಂಧಿ ಅವರ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.

2013ರಲ್ಲಿ 50 ಇದ್ದ ಪೆಟ್ರೋಲ್‌ ಈಗ 110 ಆಗಿದೆ. ಇದು ಅಚ್ಛೇ ದಿನನಾ? 2014ರಲ್ಲಿ ಅಡುಗೆ ಅನಿಲದ ಸಿಲಿಂಡರ್‌ 410 ಇತ್ತು. ಈಗ ಅದು 980 ಆಗಿದೆ. ಇದು ಅಚ್ಛೇ ದಿನಾನ? ಅಡುಗೆ ಎಣ್ಣೆ 99 ಇತ್ತು. ಈಗ 200 ಆಗಿದೆ. ಮೋದಿ ಅವರು ಹೇಳಿದಂತೆ ಪಕೋಡಾ ಮಾರುವುದಾದರೂ ಹೇಗೆ? ಇದು ಈ ಚುನಾವಣೆಯ ಪ್ರಶ್ನೆ ಆಗಬೇಕು ಎಂದರು. ಕೋವಿಡ್ ರೋಗ ತಂದು ಹಬ್ಬಿಸಿದರು. ಗಂಟೆ, ಜಾಗಟೆ ಬಾರಿಸಿ, ಚಪ್ಪಾಳೆ ಹೊಡೆದು ದೀಪ ಹಚ್ಚಿ ಎಂದರು. ಅದನ್ನು ನಾವೆಲ್ಲ ಮಾಡಿದ್ದೇವೆ. ಕೊರೋನಾ ಹೋಯಿತೇ? ಸಂಕಷ್ಟಕ್ಕೆ ಸರ್ಕಾರ ಪರಿಹಾರ ನೀಡಿತೆ? ಎಂದರು.

ಸ್ಥಳೀಯವಾಗಿ ಹೂ ಬೆಳೆದು ಅದನ್ನು ಗೋವಾಗೆ ಮಾರುತ್ತಿದ್ದರು. ಆದರೆ ಇಂದು ನೀವು ಬೆಳೆದ ಹೂವು ಬೇಡ ಎಂದು ತಿರಸ್ಕರಿಸುತ್ತಿದ್ದಾರೆ. ಈ ವಿಚಾರವಾಗಿ ನನಗೆ ಮನವಿ ಪತ್ರವನ್ನು ಗ್ರಾಮಸ್ಥರೇ ನೀಡಿದ್ದಾರೆ. ಮುಖ್ಯಮಂತ್ರಿಗಳೇ ಇದು ನಿಮ್ಮ ತವರು ಜಿಲ್ಲೆ. ಈ ರಾಜ್ಯದ ರೈತನರಕ್ಷಣೆ ಮಾಡಬೇಕಾದ ಜವಾಬ್ದಾರಿ ನಿಮ್ಮದು. ಈ ರೈತರ ಕಷ್ಟನಿಮ್ಮ ಕಣ್ಣಿಗೆ ಕಾಣುತ್ತಿಲ್ಲವೆ ಎಂದು ಪ್ರಶ್ನಿಸಿದರು.

ಮಾಜಿ ಶಾಸಕ ಮನೋಹರ ತಹಶೀಲ್ದಾರ, ಅನಿರೀಕ್ಷಿತವಾಗಿ ಚುನಾವಣೆ ಬಂದಿದೆ. ಸಮರ್ಥವಾಗಿ ಚುನಾವಣೆ ಎದುರಿಸಬೇಕಾಗಿದೆ. ಈ ಭಾಗದಲ್ಲಿ ಮೊದಲು ನೀರಾವರಿ ಸೌಲಭ್ಯಕ್ಕಾಗಿ ಬಾಳಂಬಿಡ ಯೋಜನೆ ಆರಂಭಿಸಿದ್ದು ನಾವು. ಶ್ರೀನಿವಾಸ ಮಾನೆ ಅವರಿಗೆ ನನಗಿಂತ ಹೆಚ್ಚು ಬೆಂಬಲ ನೀಡಿ ಗೆಲ್ಲಿಸಿ ಎಂದರು. ಪ್ರಚಾರಕ್ಕೂ ಮುನ್ನ ಕೊಪ್ಪರಸಿಕೊಪ್ಪದಲ್ಲಿ ಪ್ರಮುಖರು ರೋಡ್‌ ಶೋ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ ಇತರರು ಇದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

10 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago