ಹೊಸದಿಲ್ಲಿ: ಕೋವಿಡ್-19 ಸಾಂಕ್ರಾಮಿಕದ ಕಾರಣದಿಂದ ಎರಡು ವರ್ಷಗಳ ಸುಧೀರ್ಘ ಅಂತರದ ಬಳಿಕ ಭಾರತೀಯ ಮುಸ್ಲಿಮರಿಗೆ ಪವಿತ್ರ ಹಜ್ ಯಾತ್ರೆಯ ಅವಕಾಶ ಮತ್ತೆ ಲಭ್ಯವಾಗಿದೆ.
ಸೌದಿ ಅರೇಬಿಯಾ ಈ ಬಾರಿ ಅಂತರರಾಷ್ಟ್ರೀಯ ಯಾತ್ರಾರ್ಥಿಗಳ ಪ್ರವೇಶವನ್ನು ಮುಕ್ತವಾಗಿಸಿದೆ.
ಆದಾಗ್ಯೂ ಸಾಂಕ್ರಾಮಿಕ ಇನ್ನೂ ಕೆಲವೆಡೆ ಉಳಿದುಕೊಂಡಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಶಿಷ್ಟಾಚಾರಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ. ಭಾರತದಿಂದ ಈ ವರ್ಷ 79,237 ಯಾತ್ರಾರ್ಥಿಗಳನ್ನು ಕಳುಹಿಸಲು ಅವಕಾಶವಿದೆ.
ಹಜ್ ಯಾತ್ರೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾದ ಶುಕ್ರವಾರದವರೆಗೆ ಸುಮಾರು 88 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಇದರಲ್ಲಿ ಪುರಷರ ನೆರವು ಇಲ್ಲದೇ ಸ್ವತಂತ್ರ್ಯವಾಗಿ ಯಾತ್ರೆ ಕೈಗೊಳ್ಳಲು ಉದ್ದೇಶಿಸಿ 2000 ಮಹಿಳಾ ಯಾತ್ರಾರ್ಥಿಗಳು ಸೇರಿದ್ದಾರೆ. 2018ರ ಹೊಸ ಹಜ್ ನೀತಿ ಅನ್ವಯ 45 ವರ್ಷ ಮೇಲ್ಪಟ್ಟ ಮಹಿಳಾ ಯಾತ್ರಿಗಳಿಗೆ ಮಾತ್ರ ಜತೆಗೆ ಪುರುಷರು ಇಲ್ಲದೇ ಪ್ರಯಾಣಿಸಲು ಅವಕಾಶವಿದೆ. ಆದರೆ ಕನಿಷ್ಠ ನಾಲ್ಕು ಮಂದಿ ಮಹಿಳೆಯರು ಗುಂಪಿನಲ್ಲಿ ಇರಬೇಕಾಗುತ್ತದೆ.
2019ರಲ್ಲಿ ಹಜ್ ಯಾತ್ರೆ ಕೋವಿಡ್-19 ಸಾಂಕ್ರಾಮಿಕದಿಂದಾಗಿ ಸ್ಥಗಿತಗೊಳ್ಳುವ ಮುನ್ನ 2 ಲಕ್ಷ ಮಂದಿ ಭಾರತೀಯ ಮುಸ್ಲಿಮರು ಯಾತ್ರೆಗೆ ತೆರಳಿದ್ದರು. ಈ ಪೈಕಿ ಅರ್ಧದಷ್ಟು ಮಹಿಳೆಯರು. ಮಹಿಳೆಯರ ಪೈಕಿ 3040 ಮಹಿಳಾ ಯಾತ್ರಿಗಳು ಪುರಷರ ನೆರವು ಇಲ್ಲದೇ ಪ್ರಯಾಣಿಸಿದ್ದರು.
ಮೊದಲ ಹಜ್ ಯಾತ್ರಿಗಳ ಗುಂಪು ಮೇ 31ರಂದು ಪ್ರಯಾಣ ಆರಂಭಿಸಲಿದೆ. ಭಾರತ ಹಾಗೂ ಸೌದಿ ಅರೇಬಿಯಾ ಸರ್ಕಾರ ನಿಗದಿಪಡಿಸಿರುವ ಎಲ್ಲ ಕೋವಿಡ್-19 ಶಿಷ್ಟಾಚಾರಗಳನ್ನು ಪ್ರಯಾಣ ಹಾಗೂ ವಾಸ್ತವ್ಯದ ವೇಳೆ ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ.
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…