ಪಡುಬಿದ್ರಿ : ರಾಂಗ್ ಸೈಡ್ನಿಂದ ಬಂದ ಸ್ಕೂಟಿಯೊಂದು ಗೂಡ್ಸ್ ವಾಹನಕ್ಕೆ ಢಿಕ್ಕಿ ಹೊಡೆದು, ಸವಾರ ಮೃತಪಟ್ಟ ಘಟನೆ ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಎರ್ಮಾಳು ನಾರಾಳ್ತಾಯ ಗುಡಿ ಬಳಿ ಭಾನುವಾರ ಸಂಜೆ ಸಂಭವಿಸಿದೆ.
ಮೃತರನ್ನು ಅದಮಾರು ಸಮೀಪದ ವಕೀಲರ ತೋಟದ ನಿವಾಸಿ ಗುರುರಾಜ ರಾವ್ (೬೩) ಎಂದು ಗುರುತಿಸಲಾಗಿದೆ. ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಮಂಗಳೂರು ಮೂಲದ ಗೂಡ್ಸ್ ವಾಹನ ಚಾಲಕ ವಿಜಯ್ ಕಾಮತ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯ್ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಮೆದುಳಿನ ಭಾಗವು ಹೊರಬಂದಿತ್ತು. ಅಲ್ಲದೆ, ಅವರ ಒಂದು ಕೈ ಸಂಪೂರ್ಣವಾಗಿ ಜಜ್ಜಲ್ಪಟ್ಟಿದ್ದು, ಎರಡು ಮೂರು ತುಂಡುಗಳಾಗಿ ಬೇರ್ಪಟ್ಟಿರುವುದು ನಂತರ ಗಮನಕ್ಕೆ ಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಢಿಕ್ಕಿಯ ರಭಸಕ್ಕೆ ಗೂಡ್ಸ್ ವಾಹನವು ರಸ್ತೆಯ ಬದಿಯಲ್ಲಿ ಪಲ್ಟಿಯಾಗಿ ಬಿದ್ದಿತ್ತು. ಸ್ಥಳೀಯರು ವಾಹನವನ್ನು ಎತ್ತಿದ ನಂತರವಷ್ಟೇ ಚಾಲಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಒಳಗೆ ಸಿಲುಕಿರುವುದು ಕಂಡುಬಂದಿದೆ. ಇತ್ತ ಸ್ಕೂಟರ್ ಸವಾರ ಗುರುರಾಜ ರಾವ್ ಅವರ ಮೃತದೇಹವು ಅಪಘಾತದ ವೇಳೆ ಸ್ವಲ್ಪ ದೂರಕ್ಕೆ ಎಸೆಯಲ್ಪಟ್ಟಿತ್ತು.
ಪಡುಬಿದ್ರಿ ಪೊಲೀಸ್ ಉಪನಿರೀಕ್ಷಕ ಅನಿಲ್ ಕುಮಾರ್ (ಅಪರಾಧ ವಿಭಾಗ) ಮತ್ತು ಅವರ ತಂಡ ಸ್ಥಳಕ್ಕೆ ಧಾವಿಸಿ, ಸಾರ್ವಜನಿಕರ ಸಹಾಯದೊಂದಿಗೆ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿದರು.
ಮೃತರ ದೇಹವನ್ನು ಉಡುಪಿಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…