ಎರ್ಮಾಳು : ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಬದಿಯ ಮೋರಿಯ ದಂಡೆಗೆ ಡಿಕ್ಕಿ ಹೊಡೆದು ಮುಗುಚಿ ಬಿದ್ದ ಘಟನೆ ಕಾಪು ತಾಲೂಕಿನ ಬಡಾ ಎರ್ಮಾಳುವಿನ ಅಪೂರ್ವ ಲಾಡ್ಜ್ ಮುಂಭಾಗದಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ.
ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಕಾರು ಏಕಾಏಕಿಯಾಗಿ ರಸ್ತೆಯ ಬದಿಯ ಮೋರಿಯ ದಂಡೆಗೆ ಬಡಿದಿದೆ. ಚಾಲಕ ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರನ್ನು ಬಿಟ್ಟು, ಮರಳಿ ಉಡುಪಿಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ದಂಡೆಗೆ ಬಡಿದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಬಂದ ಹೆಜಮಾಡಿ ಟೋಲ್ ಸಿಬ್ಬಂದಿ ಹಾಗೂ ಪೊಲೀಸರು ಹೆದ್ದಾರಿಗೆ ಅಡ್ಡವಾಗಿ ಉರುಳಿಬಿದ್ದ ಕಾರನ್ನು ಯಂತ್ರದ ಮೂಲಕ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…