Featured

ಎರ್ಮಾಳು : ಸರಕಾರಿ ಜಮೀನಿನಲ್ಲಿ ನಡೆಯುತ್ತಿದ್ದ ಅಕ್ರಮ ಕಾಮಗಾರಿ ನಿಲ್ಲಿಸಿದ ಕಾಪು ತಹಶೀಲ್ದಾರ್ – vishwanews24

ಎರ್ಮಾಳು  :ಸರಕಾರಿ ಜಮೀನಿನಲ್ಲಿ ನಡೆಯುತ್ತಿದ್ದ ಅಕ್ರಮ ಕಾಮಗಾರಿ ನಿಲ್ಲಿಸಿದ ಕಾಪು ತಹಶೀಲ್ದಾರ್

ಕಾಪು: ಕಾಪು ತಾಲೂಕಿನ ಎರ್ಮಾಳು ತೆಂಕ ಸಮುದ್ರ ಕಿನಾರೆಯಲ್ಲಿ ಅಕ್ರಮ ಚರಂಡಿ ನಿರ್ಮಾಣ ಮಾಡುತ್ತಿದ್ದ ರೆಸಾರ್ಟ್‌ವೊಂದರ ಕಾಮಗಾರಿಯನ್ನು ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್ ತಡೆ ಹಿಡಿದಿದ್ದಾರೆ. ಎರ್ಮಾಳು ತೆಂಕದಲ್ಲಿ ಕಾರ್ಯಾಚರಿಸುತ್ತಿರುವ ರೆಸಾರ್ಟ್ ಮಾಲೀಕರು ಸರ್ಕಾರಿ ಜಾಗದಲ್ಲಿರುವ ಪರಂಬೋಗು ತೋಡನ್ನು ಅಗಲೀಕರಣಗೊಳಿಸುವ ಕಾಮಗಾರಿ ನಡೆಸುತ್ತಿದ್ದರು.

ಸ್ಥಳೀಯ ಗ್ರಾಮಸ್ಥರು ಈ ಕಾಮಗಾರಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಯಾರ ಮಾತನ್ನೂ ಕೇಳದೆ ರೆಸಾರ್ಟ್ ಮಾಲೀಕರು ಕಾಮಗಾರಿ ಮುಂದುವರಿಸಿದ್ದರು. ಈ ಬಗ್ಗೆ ತೆಂಕ ಗ್ರಾಮ ಪಂಚಾಯತಿ ಮತ್ತು ಕಾಪು ತಹಸೀಲ್ದಾರ್ ಅವರಿಗೆ ದೂರು ನೀಡಲಾಗಿತ್ತು. ಘಟನಾ ಸ್ಥಳಕ್ಕೆ ಕಾಪು ತಹಶೀಲ್ದಾರ್ ಪ್ರತಿಭಾ ಆಗಮಿಸಿ, ಯಾವುದೇ ಕಾರಣಕ್ಕೂ ಸರಕಾರಿ ಜಾಗದಲ್ಲಿ ಖಾಸಗಿಯವರು ಕಾಮಗಾರಿ ಮಾಡಕೂಡದು. ಏನಿದ್ದರೂ ಸರ್ಕಾರದ ಆದೇಶದಂತೆ
ನಡೆಯಬೇಕು.

ಈಗಾಗಲೇ ಗ್ರಾಮ ಪಂಚಾಯತ್ ಈ ಕಾಮಗಾರಿಗೆ ಆಕ್ಷೇಪ ವ್ಯಕ್ತಪಡಿಸಿದೆ. ತಕ್ಷಣ ಕಾಮಗಾರಿಯನ್ನು ನಿಲ್ಲಿಸಬೇಕು. ಆದೇಶವನ್ನು ಧಿಕ್ಕರಿಸಿ ಕಾಮಗಾರಿ ಮುಂದುವರಿಸಿದರೆ, ಕಾನೂನು ಕ್ರಮ ಕೈಗೊಳ್ಳುವಂತೆ ಕಂದಾಯ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಆದೇಶ ನೀಡಿದರು. ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಘಟನಾ ಸ್ಥಳದಲ್ಲಿದ್ದು ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

5 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

5 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

6 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

6 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

6 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

9 hours ago