ಕಾಪು: ಕಾಪು ತಾಲೂಕಿನ ಎರ್ಮಾಳು ತೆಂಕ ಸಮುದ್ರ ಕಿನಾರೆಯಲ್ಲಿ ಅಕ್ರಮ ಚರಂಡಿ ನಿರ್ಮಾಣ ಮಾಡುತ್ತಿದ್ದ ರೆಸಾರ್ಟ್ವೊಂದರ ಕಾಮಗಾರಿಯನ್ನು ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್ ತಡೆ ಹಿಡಿದಿದ್ದಾರೆ. ಎರ್ಮಾಳು ತೆಂಕದಲ್ಲಿ ಕಾರ್ಯಾಚರಿಸುತ್ತಿರುವ ರೆಸಾರ್ಟ್ ಮಾಲೀಕರು ಸರ್ಕಾರಿ ಜಾಗದಲ್ಲಿರುವ ಪರಂಬೋಗು ತೋಡನ್ನು ಅಗಲೀಕರಣಗೊಳಿಸುವ ಕಾಮಗಾರಿ ನಡೆಸುತ್ತಿದ್ದರು.
ಸ್ಥಳೀಯ ಗ್ರಾಮಸ್ಥರು ಈ ಕಾಮಗಾರಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಯಾರ ಮಾತನ್ನೂ ಕೇಳದೆ ರೆಸಾರ್ಟ್ ಮಾಲೀಕರು ಕಾಮಗಾರಿ ಮುಂದುವರಿಸಿದ್ದರು. ಈ ಬಗ್ಗೆ ತೆಂಕ ಗ್ರಾಮ ಪಂಚಾಯತಿ ಮತ್ತು ಕಾಪು ತಹಸೀಲ್ದಾರ್ ಅವರಿಗೆ ದೂರು ನೀಡಲಾಗಿತ್ತು. ಘಟನಾ ಸ್ಥಳಕ್ಕೆ ಕಾಪು ತಹಶೀಲ್ದಾರ್ ಪ್ರತಿಭಾ ಆಗಮಿಸಿ, ಯಾವುದೇ ಕಾರಣಕ್ಕೂ ಸರಕಾರಿ ಜಾಗದಲ್ಲಿ ಖಾಸಗಿಯವರು ಕಾಮಗಾರಿ ಮಾಡಕೂಡದು. ಏನಿದ್ದರೂ ಸರ್ಕಾರದ ಆದೇಶದಂತೆ
ನಡೆಯಬೇಕು.
ಈಗಾಗಲೇ ಗ್ರಾಮ ಪಂಚಾಯತ್ ಈ ಕಾಮಗಾರಿಗೆ ಆಕ್ಷೇಪ ವ್ಯಕ್ತಪಡಿಸಿದೆ. ತಕ್ಷಣ ಕಾಮಗಾರಿಯನ್ನು ನಿಲ್ಲಿಸಬೇಕು. ಆದೇಶವನ್ನು ಧಿಕ್ಕರಿಸಿ ಕಾಮಗಾರಿ ಮುಂದುವರಿಸಿದರೆ, ಕಾನೂನು ಕ್ರಮ ಕೈಗೊಳ್ಳುವಂತೆ ಕಂದಾಯ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಆದೇಶ ನೀಡಿದರು. ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಘಟನಾ ಸ್ಥಳದಲ್ಲಿದ್ದು ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…