Featured

ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಸಿಹಿ ಸುದ್ದಿ ; ರಾಜ್ಯದಾದ್ಯಂತ ವಿದ್ಯುತ್ ವಾಹನ ರೀಚಾರ್ಜ್ ಕೇಂದ್ರಗಳ ಸ್ಥಾಪನೆ : ಸುನಿಲ್ ಕುಮಾರ್ -Vishwanews24

ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಸಿಹಿ ಸುದ್ದಿ, ರಾಜ್ಯದಾದ್ಯಂತ ವಿದ್ಯುತ್ ವಾಹನ ರೀಚಾರ್ಜ್ ಕೇಂದ್ರಗಳ ಸ್ಥಾಪನೆ : ಸುನಿಲ್ ಕುಮಾರ್ -Vishwanews24

ಬೆಂಗಳೂರು: ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯುತ್ ಚಾಲಿತ ವಾಹನಗಳು ಬರುತ್ತಿರುವ ಕಾರಣದಿಂದ ಎಲೆಕ್ಟ್ರಿಕ್ ರೀಚಾರ್ಜ್ ಸೆಂಟರ್‌ಗಳನ್ನು ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ತೆರೆಯಲಾಗುವುದು ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ಕ್ಕೆ ಮಂಗಳವಾರ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಲು ಆಗಮಿಸಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಎಲೆಕ್ಟ್ರಿಕ್ ವಾಹನ ಸೌಕರ್ಯಕ್ಕಾಗಿ ಎಲ್ಲ ಜಿಲ್ಲಾ ಕೇಂದ್ರಗಳು, ಪ್ರವಾಸೋದ್ಯಮ ಕೇಂದ್ರಗಳಲ್ಲಿ ರೀಚಾರ್ಜ್ ಕೇಂದ್ರ ತೆರೆಯಲು ಬೇರೆ ಬೇರೆ ಎಸ್ಕಾಂಗಳಿಗೆ ಗುರಿ ನೀಡಲಾಗುವುದು. ರಾಜ್ಯದ ಸರಕಾರಿ ಕಛೇರಿಗಳಲ್ಲಿ ಪ್ರೀಪೇಯ್ಡ್ ವಿದ್ಯುತ್ ಮೀಟರ್ ಅಳವಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಉತ್ತರ ಕರ್ನಾಟಕ ರೈತರಿಗೆ ವಿದ್ಯುತ್

ಉತ್ತರ ಕರ್ನಾಟಕದಲ್ಲಿ ಕೃಷಿ ಪಂಪ್‍ಸೆಟ್‌ಗಳಿಗೆ ನಿರಂತರ 7 ಗಂಟೆ ವಿದ್ಯುತ್ ನೀಡಬೇಕೆಂಬ ಬೇಡಿಕೆ ಇತ್ತು. ಇದಕ್ಕಾಗಿ ವಿವಿಧೆಡೆ 60ಕ್ಕೂ ಹೆಚ್ಚು ಸಬ್ ಸ್ಟೇಷನ್‌ಗಳನ್ನು ಇನ್ನು 100 ದಿನಗಳ ಒಳಗೆ ಕೆಪಿಟಿಸಿಎಲ್ ಮೂಲಕ ನಿರ್ಮಿಸಲಾಗುವುದು. ಕೃಷಿ ಪಂಪ್‍ಸೆಟ್‌ಗಳಿಗೆ ನಿರಂತರ 7 ಗಂಟೆ ವಿದ್ಯುತ್ ನೀಡಲು ಇದರಿಂದ ಸಾಧ್ಯವಾಗಲಿದೆ ಎಂದು ವಿವರಿಸಿದರು.

ವರ್ಗಾವಣೆಗೆ ಕಡಿವಾಣ

ಜೆಇ, ಲೈನ್‌ಮನ್ ನೇಮಕಾತಿ, ಜೆಇ ಹುದ್ದೆಗೆ ಬಡ್ತಿ ಸಮಸ್ಯೆಯನ್ನೂ ಬಗೆಹರಿಸಲಾಗುವುದು. ವರ್ಗಾವಣೆ ದಂಧೆಯನ್ನು ಯಾವುದೇ ಅಧಿಕಾರಿಗಳು ಮಾಡುವಂತಿಲ್ಲ. ವರ್ಷ ಪೂರ್ತಿ ವರ್ಗಾವಣೆ ಇರುವುದಿಲ್ಲ ಎಂದು ತಿಳಿಸಿದರು.

ಎರಡೂ ಇಲಾಖೆಗಳಲ್ಲಿ 100 ದಿನಗಳ ಕಾರ್ಯಕ್ರಮ ಯೋಜಿಸಿದ್ದೇವೆ. ಈ 100 ದಿನಗಳಲ್ಲಿ ಗ್ರಾಮಾಂತರದಲ್ಲಿ ಮನೆಗಳನ್ನು ಕಟ್ಟಿ ವಿದ್ಯುತ್ ಸಂಪರ್ಕ ಪಡೆಯಲು ಸಾಧ್ಯವಾಗದ ಮನೆಯವರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಇದನ್ನು ಮುಖ್ಯಮಂತ್ರಿಗಳ ಆಶಯದಂತೆ ‘ಬೆಳಕು’ ಯೋಜನೆಯಡಿಯಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.

ಅತ್ಯಂತ ದುರಸ್ತಿ ಸ್ಥಿತಿಯಲ್ಲಿರುವ ಟ್ರಾನ್ಸ್‍ಫಾರ್ಮರ್ ಬದಲಾವಣೆಗೆ ಟ್ರಾನ್ಸ್‍ಫಾರ್ಮರ್ ಬ್ಯಾಂಕ್ ಸ್ಥಾಪಿಸಲಾಗುವುದು. ಕೇವಲ 24 ಗಂಟೆಗಳಲ್ಲಿ ಹಾಳಾದ ವಿದ್ಯುತ್ ಟ್ರಾನ್ಸ್‍ಫಾರ್ಮರ್ ಬದಲಾವಣೆ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.

ಗಂಗಾ ಕಲ್ಯಾಣ ಯೋಜನೆಯಡಿ ಬೋರ್‍ವೆಲ್ ಕೊರೆದಿದ್ದು, ತುಂಬಾ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ವಿಳಂಬವಾಗುತ್ತಿದೆ ಎಂಬುದು ಗಮನಕ್ಕೆ ಬಂದಿದೆ. ಬೋರ್‍ವೆಲ್ ಸಿದ್ಧವಾದ 30 ದಿನಗಳ ಒಳಗಾಗಿ ವಿದ್ಯುತ್ ಸಂಪರ್ಕ ನೀಡಲಾಗುವುದು. ಅನಗತ್ಯವಾಗಿ ರೈತರ ಓಡಾಟವನ್ನು ತಪ್ಪಿಸಲಾಗುವುದು ಎಂದು ತಿಳಿಸಿದರು.

ಸಾಧಕರನ್ನು ಗುರುತಿಸುವ ಕೆಲಸ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಿದ್ದು, ಪ್ರಶಸ್ತಿಗಾಗಿ ಅರ್ಜಿ ಹಾಕುವುದು ನಿಧಾನವಾಗಿ ಕಡಿಮೆ ಆಗಬೇಕೆಂಬ ಚಿಂತನೆ ಇದೆ. ಸಾಧಕರನ್ನು ಗುರುತಿಸುವ ಪರಂಪರೆ ನಾಡಿನಾದ್ಯಂತ ನಿರ್ಮಾಣವಾಗಬೇಕು. ಎಲೆಯ ಮರೆ, ತೆರೆಯ ಮರೆಯಲ್ಲಿರುವ ಸಾಧಕರನ್ನು ಗುರುತಿಸುವ ಯೋಜನೆ ಇದೆ ಎಂದು ವಿವರಿಸಿದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

6 minutes ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 hour ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

2 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

2 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

2 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago