Featured

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ

ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯ ನಡುವೆ, ಅನಿಲ ಕಂಪನಿಗಳು ತಮ್ಮ ಬುಕಿಂಗ್ ನಿಯಮಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿವೆ ಎನ್ನುವ ಸುದ್ದಿಗಳು ಹರಿದಾಡಿದ್ದವು. ಆದರೆ ಅಂತಹ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಸರ್ಕಾರ ಹೇಳಿದೆ.

ತಮ್ಮ ಮುಂದಿನ ಸಿಲಿಂಡರ್ ಬುಕ್ ಮಾಡಲು ಹೆಚ್ಚು ಸಮಯ ಕಾಯಬೇಕಾಗುತ್ತದೆ ಎಂದು ಹೇಳಲಾಗಿತ್ತು. ಗ್ರಾಹಕರು ನಿಗದಿತ ಸಮಯಕ್ಕಿಂತ ಮೊದಲು ಗ್ಯಾಸ್ ಸಿಲಿಂಡರ್ ಅನ್ನು ಬುಕ್ ಮಾಡಲು ಸಾಧ್ಯವಾಗುವುದಿಲ್ಲ. ಪೂರೈಕೆಯನ್ನು ಸಮತೋಲನಗೊಳಿಸಲು ಮತ್ತು ಅಗತ್ಯವಿರುವವರಿಗೆ ಅನಿಲ ಲಭ್ಯವಾಗುವಂತೆ ನೋಡಿಕೊಳ್ಳಲು ಈ ರೀತಿ ಮಾಡಲಾಗಿದೆ ಎಂದು ವರದಿಗಳು ಹೇಳಿದ್ದವು.

ಇದನ್ನೂ ಓದಿ:

ವರದಿಗಳಲ್ಲಿ ಏನಿತ್ತು? 14.2 ಕೆಜಿ ಗೃಹಬಳಕೆ ಸಿಲಿಂಡರ್‌ಗಳ ಬುಕಿಂಗ್ ಅಂತರವನ್ನು ಈಗ ಹೆಚ್ಚಿಸಲಾಗಿದೆ. ಹಿಂದಿನ 25 ದಿನಗಳ ಅವಧಿಯನ್ನು ಈಗ 35 ದಿನಗಳವರೆಗೆ ವಿಸ್ತರಿಸಲಾಗಿದೆ. ಇದರರ್ಥ ನೀವು ಒಂದು ಸಿಲಿಂಡರ್ ಖರೀದಿಸಿದ್ದರೆ, ಮುಂದಿನ ಬುಕಿಂಗ್‌ಗಾಗಿ ನೀವು ಕನಿಷ್ಠ 35 ದಿನಗಳು ಕಾಯಬೇಕಾಗುತ್ತದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅಡಿಯಲ್ಲಿ, ಈ ನಿಯಮವು ನಿರ್ದಿಷ್ಟವಾಗಿ ಎರಡು ಸಿಲಿಂಡರ್ ಸಂಪರ್ಕವನ್ನು ಹೊಂದಿರುವವರಿಗೆ ಅನ್ವಯಿಸುತ್ತದೆ, ಅಂದರೆ ಡಬಲ್-ಬಾಟಮ್ ಸಂಪರ್ಕವನ್ನು ಹೊಂದಿರುವವರಿಗೆ ಅನ್ವಯವಾಗುತ್ತೆ ಎಂದು ಹೇಳಲಾಗಿತ್ತು.

ಅನಿಲ ಕಂಪನಿಗಳು ವಿವಿಧ ರೀತಿಯ ಗ್ರಾಹಕರಿಗೆ ವಿಭಿನ್ನ ನಿಯಮಗಳನ್ನು ನಿಗದಿಪಡಿಸಿವೆ. ಉಜ್ವಲ ಯೋಜನೆಯ ಫಲಾನುಭವಿಗಳು ಈಗ ಇನ್ನೂ ಹೆಚ್ಚು ಸಮಯ ಕಾಯಬೇಕಾಗುತ್ತದೆ. ಈ ಯೋಜನೆಯಡಿಯಲ್ಲಿ ದಾಖಲಾದವರು ತಮ್ಮ ಮುಂದಿನ ಬುಕಿಂಗ್‌ಗಾಗಿ 45 ದಿನಗಳು ಕಾಯಬೇಕಾಗುತ್ತದೆ. ಸಿಂಗಲ್-ಸಿಲಿಂಡರ್ ಸಂಪರ್ಕ ಹೊಂದಿರುವ ಗ್ರಾಹಕರು ಹಿಂದಿನ ವಿತರಣೆಯ 25 ದಿನಗಳ ನಂತರ ಮಾತ್ರ ಹೊಸ ಸಿಲಿಂಡರ್ ಅನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ ಎನ್ನಲಾಗಿತ್ತು.

ಇದನ್ನೂ ಓದಿ:

ಆದರೆ, ಅಸ್ತಿತ್ವದಲ್ಲಿರುವ ಮರುಪೂರಣ ಬುಕಿಂಗ್ ಸಮಯ ಮಿತಿಗಳು ಬದಲಾಗದೆ ಉಳಿದಿವೆ ಮತ್ತು ಮುಂದುವರಿಯುತ್ತವೆ. ನಗರ ಪ್ರದೇಶಗಳಲ್ಲಿ 25 ದಿನಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 45 ದಿನಗಳಲ್ಲಿ ಮತ್ತೊಂದು ಸಿಲಿಂಡರ್ ಬುಕ್ ಮಾಡಬಹುದು. ದೇಶದಲ್ಲಿ ಸಾಕಷ್ಟು LPG ಸ್ಟಾಕ್‌ಗಳು ಲಭ್ಯವಿದೆ. ಯಾವುದೇ ವದಂತಿಯನ್ನು ನಂಬಬಾರದು ಎಂದು ಪಿಐಬಿಯಲ್ಲಿ ಬರೆಯಲಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

6 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

9 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

9 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

9 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

10 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

10 hours ago