ಬೆಂಗಳೂರು: ಎಲ್ಲದಕ್ಕೂ ಕಾಂಗ್ರೆಸ್ ಕಾರಣ ಎನ್ನುವ ಈ ಬಿಜೆಪಿಯವರಿಗೆ ಕಾಮಲೇ ರೋಗ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದ್ದಾರೆ.
ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರದಲ್ಲಿ ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಕಾಮಾಲೆ ರೋಗ ಬಂದಿದೆ. ಸುಳ್ಳು ಹೇಳುವುದು, ಸುಳ್ಳು ಹಬ್ಬಿಸುವುದು, ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಿದ್ದಾರೆ. ಹಾಕಲಿ ಬೇಡ ಅನ್ನಲ್ಲ. ಆದರೆ ಟಿಪ್ಪು ಫೋಟೋ ತೆಗೆದಿದ್ದಾರೆ. ಹೀಗೆ ಮಾಡಿದರೆ ಗಲಭೆ ಆಗಲ್ವಾ? ಈಶ್ವರಪ್ಪ ಕಾಂಗ್ರೆಸ್ ಬಗ್ಗೆ ಆರೋಪ ಮಾಡುತ್ತಾನೆ ಇರುತ್ತಾರೆ. ತಪ್ಪು ಅವರು ಮಾಡಿ ಕಾಂಗ್ರೆಸ್ ಮೇಲೆ ಹಾಕುತ್ತಾರೆ. ಮಗೂನು ಚಿವುಟುತ್ತಾರೆ ತೊಟ್ಟಿಲು ಕೂಡ ತೂಗುತ್ತಾರೆ ಎಂದು ಕಿಡಿಕಾರಿದ್ದಾರೆ.
ಘಟನೆಯಲ್ಲಿ ಎಸ್ಡಿಪಿಐ ಅವರಿದ್ದರೆ ಕ್ರಮ ತೆಗೆದುಕೊಳ್ಳಿ. ಸರ್ಕಾರ ನಿಮ್ಮದೆ ಇದೆ. ಎಸ್ಡಿಪಿಐ ಪಿಎಫ್ಐ ಸಮರಸ್ಯ ಹಾಳು ಮಾಡುತ್ತಿದ್ದಾರೆ ಎಂಬ ಬಗ್ಗೆ ನಿಮ್ಮ ಬಳಿ ದಾಖಲೆ ಇದ್ದರೆ, ಕ್ರಮ ತೆಗೆದುಕೊಳ್ಳಿ. ಇಬ್ಬಂದಿ ರಾಜಕೀಯ ಮಾಡಬೇಡಿ. ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದ್ದಾರೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ 4ನೇ ವರ್ಷದ ಪುಣ್ಯತಿಥಿ: ಪ್ರಧಾನಿ ಸೇರಿ ಗಣ್ಯರಿಂದ ಗೌರವ ನಮನ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…