Featured

ಎಲ್ಲರೂ ಹೊಸ ಭವಿಷ್ಯ ,ಹೊಸ ರಾಜಕೀಯ ಪ್ರಾರಂಭಕ್ಕೆ ನನ್ನೊಂದಿಗೆ ಕೈಜೋಡಿಸಿ: ಪ್ರಿಯಾಂಕ ಗಾಂಧಿ ವಾದ್ರಾ – Vishwanews24

ನವದೆಹಲಿ:ಎಐಸಿಸಿ ಪ್ರಧಾನ ಕಾರ್ಯದರ್ಶಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಿಯಾಂಕ ಗಾಂಧಿ ವಾದ್ರಾ ಮತ್ತು ಜ್ಯೋತಿರಾದಿತ್ಯ ಸಿಂಧ್ಯ ಇಂದು ಲಖನೌಗೆ ಭೇಟಿ ನೀಡಲಿದ್ದು, ಇವರಿಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಕೂಡ ಸಾಥ್‌ ನೀಡಲಿದ್ದಾರೆ.

“ನಾನಿಂದು ಲಖನೌಗೆ ನಿಮ್ಮನ್ನು ಭೇಟಿಯಾಗಲು ಬರುತ್ತಿದ್ದೇನೆ. ನಾವೆಲ್ಲರೂ ಒಟ್ಟಿಗೆ ಸೇರಿ ಹೊಸ ಮಾದರಿಯ ರಾಜಕೀಯವನ್ನು ಪ್ರಾರಂಭಿಸುವ ಭರವಸೆಯನ್ನು ಹೊಂದಿದ್ದೇನೆ. ಈ ರಾಜಕೀಯದಲ್ಲಿ ಎಲ್ಲರೂ ಪಾಲುದಾರರಾಗಿರುತ್ತಾರೆ. ನನ್ನ ಯುವ ಸ್ನೇಹಿತರು, ನನ್ನ ಸೋದರಿಯರು ಮತ್ತು ದುರ್ಬಲರು ಸೇರಿದಂತೆ ಎಲ್ಲರ ಧ್ವನಿಯೂ ಇಲ್ಲಿ ಕೇಳಿಸುತ್ತದೆ,” ಎಂದು ಕಾಂಗ್ರೆಸ್‌ ಶಕ್ತಿ ಆಪ್‌ ಮೂಲಕ ಆಡಿಯೋ ಮೆಸೇಜ್‌ ಮತ್ತು ಮತದಾರರಿಗೆ ಕರೆ ಮಾಡಿ ತಿಳಿಸಿದ್ದಾರೆ.

“ನನ್ನೊಂದಿಗೆ ಬನ್ನಿ. ಎಲ್ಲರೂ ಹೊಸ ಭವಿಷ್ಯ, ಹೊಸ ರಾಜಕೀಯವನ್ನು ರೂಪಿಸೋಣ. ಧನ್ಯವಾದಗಳು,” ಎಂದು ಸಂದೇಶ ಕಳುಹಿಸಿದ್ದಾರೆ.

ಏರ್‌ಪೋರ್ಟ್‌ನಿಂದ ಪಕ್ಷದ ಕಚೇರಿವರೆಗೆ ತಲುಪವವರೆಗೂ ನಡೆಸುವ ರೋಡ್‌ ಷೋಗಾಗಿ ಕಾಂಗ್ರೆಸ್‌ ಕಾರ್ಯಕರ್ತರು ಎಲ್ಲ ರೀತಿಯ ಸಿದ್ಧತೆಯನ್ನು ಕೈಗೊಂಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ ಉತ್ತರ ಪ್ರದೇಶದಲ್ಲಿ ಪ್ರಚಾರಕ್ಕೆ ಶುರುಮಾಡಿದೆ. ನಾಳೆಯಿಂದ ಮೂರು ದಿನಗಳ ಕಾಲ ಪ್ರಧಾನ ಕಾರ್ಯದರ್ಶಿಗಳು ಪಕ್ಷದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಲಿದ್ದಾರೆ..

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

2 days ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 days ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 days ago