ಬೆಂಗಳೂರು; ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ ಎಂದು ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.
ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ. ಭಾರತದ ಹೆಗ್ಗುರುತಾಗಲಿ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ರಾಮನ ಜನಪರ ಕಾಳಜಿ ಹಾಗೂ ಹೃದಯ ವೈಶಾಲ್ಯ ಈಗಿನ ನಮ್ಮ ಜನಪ್ರತಿನಿಧಿಗಳಿಗೆ ಮೇರು ಪ್ರೇರಣೆಯಾಗಲಿ. ಅಯೋಧ್ಯೆಯಲ್ಲಿ ಮಂದಿರವೊಂದನ್ನು ಕಟ್ಟಿಕೊಳ್ಳಲು ಭಾರತೀಯರಾದ ನಾವು ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದೆ. ಆದರೆ ಅದು ಕೆಲವರಿಗೆ ರಾಜಕೀಯ ದಾಳವಾಗಿದ್ದು, ಅಧಿಕಾರಕ್ಕೇರಲು ಏಣಿಯಾಗಿದ್ದು ನಮ್ಮ ಕೆಟ್ಟ ಘಳಿಗೆಗಳಲ್ಲಿ ಒಂದು. ರಾಮನ ಆದರ್ಶಗಳಿಗೆ ಈ ದೇಗುಲವು ಸಾಮರಸ್ಯದ ಸಂಕೇತವಾಗಿ ಉಳಿಯಲಿ. ಈ ಮೂಲಕ ಸ್ವಾರ್ಥ ನಶಿಸಲಿ. ಎಲ್ಲರಿಗೂ ಶುಭ ತರಲಿ ಎಂದು ಆಶಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…