ಹೊಸದಿಲ್ಲಿ: ಆತ್ಮನಿರ್ಭರ ಭಾರತ ನಿರ್ಮಾಣದ ಗುರಿ ಸಾಂಘಿಕ ಪ್ರಯತ್ನವಾಗಿದ್ದು, ಇಡೀ ದೇಶ ಈ ಗುರಿ ತಲುಪಲು ಒಂದಾಗಿ ಶ್ರಮಿಸಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕೇಂದ್ರ ಬಜೆಟ್ ಮತ್ತು ಆತ್ಮನಿರ್ಭರ ಭಾರತದ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ಆತ್ಮನಿರ್ಭರತೆ ದೇಶದ ತುರ್ತು ಅಗತ್ಯ ಎಂದು ಹೇಳಿದರು.
ಆತ್ಮನಿರ್ಭರತೆ ಎಂದರೆ ಎಲ್ಲಾ ಕ್ಷೇತ್ರಗಳಲ್ಲಿ ಸ್ವಾವಲಂಬನೆ ಸಾಧಿಸುವುದು. ಇದನ್ನು ಹಂತ ಹಂತವಾಗಿ ನಾವು ಸಾಧಿಸಬೇಕಿದೆ. ಇದಕ್ಕಾಗಿ ಒಗ್ಗಟ್ಟು ಪ್ರದರ್ಶನ ಅತ್ಯಗತ್ಯ ಎಂದು ಪ್ರಧಾನಿ ಮೋದಿ ಹೇಳಿದರು. ಭಾರತ 75ನೇ ಸ್ವಾತಂತ್ರ್ಯ ಸಂಭ್ರಮದ ಹೊಸ್ತಿಲಲ್ಲಿದ್ದು, ಭಾರತದ ಭವಿಷ್ಯವನ್ನು ಸದೃಢವನ್ನಾಗಿ ಮಾಡಲು ಆತ್ಮನಿರ್ಭರತೆ ಅನಿವಾರ್ಯವೂ ಹೌದು ಎಂದು ಪ್ರಧಾನಿ ಮೋದಿ ಹೇಳಿದರು.
ಇದನ್ನೂ ಓದಿ :
ನಿನ್ನೆ(ಫೆ.1-ಮಂಗಳವಾರ) ಮಂಡಿಸಿದ ಕೇಂದ್ರ ಬಜೆಟ್ ಆಧುನಿಕ ಭಾರತ ನಿರ್ಮಾಣಕ್ಕಾಗಿ ಪೂರಕವಾಗಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟರು. ಭಾರತದ ಅರ್ಥವ್ಯವಸ್ಥೆ 2 ಕೋಟಿ 30 ಲಕ್ಷ ಕೋಟಿ ಗಾತ್ರದ್ದಾಗಿದ್ದು, ನಮ್ಮ ವಿಶಾಲ ದೇಶದ ಶಕ್ತಿ ಸಮಪನ್ಮೂಲಗಳ ಸದ್ಬಳಕೆಗೆ ನಿರ್ದಿಷ್ಟ ಗುರಿ ಇಟ್ಟುಕೊಳ್ಳಬೇಕಿದೆ. ಕೇಂದ್ರ ಬಜೆಟ್ ಈ ಗುರಿ ತಲುಪಲು ಇರುವ ಪ್ರಮುಖ ಸಾಧನ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…