ಬೆಂಗಳೂರು: ಸ್ಯಾಂಡಲ್ ವುಡ್ ಹಾಗೂ ಟಾಲಿವುಡ್ ನಲ್ಲಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ ಕನ್ನಡ ‘ವೃತ್ರ’ ಸಿನಿಮಾದಿಂದ ಹೊರ ಬಂದಿದ್ದಾರೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿತ್ತು. ಈಗ ಈ ಗಾಸಿಪ್ ಗಳಿಗೆ ಸ್ವತಃ ರಶ್ಮಿಕಾ ಮಂದಣ್ಣ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.
‘ವೃತ್ರ’ ಸಿನಿಮಾವನ್ನು ಗೌತಮ್ ಅಯ್ಯರ್ ನಿರ್ದೇಶನ ಮಾಡುತ್ತಿದ್ದರು. ಆದರೆ ರಶ್ಮಿಕಾ ಈ ಸಿನಿಮಾದಿಂದ ಹೊರ ಬಂದಿದ್ದರ ಬಗ್ಗೆ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. ”ನಾನು ‘ವೃತ್ರ’ ಸಿನಿಮಾದಲ್ಲಿ ಇರುವುದಿಲ್ಲ. ನನ್ನ ವೃತ್ತಿ ಜೀವನದ ಆರಂಭದಲ್ಲಿಯೇ ಈ ರೀತಿಯ ನಿರ್ಧಾರ ತೆಗೆದುಕೊಳ್ಳುವುದು ಉತ್ತಮವಲ್ಲ ಎಂದು ನಾನು ಭಾವಿಸಿದ್ದೇನೆ. ಆದ್ದರಿಂದ ಈ ಬಗ್ಗೆ ನಾನು ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕರ ಬಳಿ ಚರ್ಚೆ ಮಾಡಿದ್ದೇನೆ. ಅವರು ನನ್ನ ಪರಿಸ್ಥಿತಿಯನ್ನ ಅರ್ಥ ಮಾಡಿಕೊಂಡಿದ್ದಾರೆ. ಗೌತಮ್ ಹಾಗೂ ಚಿತ್ರ ತಂಡಕ್ಕೆ ನನ್ನ ಶುಭಾಶಯಗಳು ಮತ್ತು ಧನ್ಯವಾದಗಳು ” ಎಂದು ರಶ್ಮಿಕಾ ಮಂದಣ್ಣ ಬರೆದು ಟ್ವೀಟ್ ಮಾಡಿದ್ದಾರೆ.
‘ವೃತ್ರ’ ಸಿನಿಮಾಕ್ಕಾಗಿ ನಟಿ ರಶ್ಮಿಕಾ ಮಂದಣ್ಣ ಫೋಟೋ ಶೂಟ್ ಕೂಡ ಮಾಡಿಸಿದ್ದು, ರಶ್ಮಿಕಾ ಅವರ ಪೋಸ್ಟರ್ ಕೂಡ ರಿಲೀಸ್ ಆಗಿತ್ತು. ಈ ಸಿನಿಮಾದಲ್ಲಿ ರಶ್ಮಿಕಾಗೆ ತನಿಖಾ ಅಧಿಕಾರಿಯ ಪಾತ್ರದಲ್ಲಿ ಅಭಿನಯಿಸಬೇಕಿತ್ತು. ಆದರೆ ಈಗ ಅನಿವಾರ್ಯ ಕಾರಣಗಳಿಂದ ಕನ್ನಡ ಸಿನಿಮಾದಿಂದ ರಶ್ಮಿಕಾ ಹೊರ ಬಂದಿದ್ದಾರೆ.
ಸದ್ಯಕ್ಕೆ ರಶ್ಮಿಕಾ ಟಾಲಿವುಡ್ ನಲ್ಲಿ ಬಹು ಬೇಡಿಕೆ ನಟಿಯಾಗಿದ್ದು, ಈಗಾಗಲೇ ಎರಡು ತೆಲುಗು ಸಿನಿಮಾಗಳಲ್ಲಿ ನಟಿಸಿ ಯಶಸ್ಸು ಕಂಡಿದ್ದಾರೆ. ಈಗ ನಟ ನಾಗರ್ಜುನ್ ಮತ್ತು ನಾನಿ ಅಭಿನಯ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅಷ್ಟೇ ಅಲ್ಲದೇ ‘ಗೀತಾ ಗೋವಿಂದಂ’ ಸಿನಿಮಾದಲ್ಲಿ ಮಾಡಿದ್ದ ನಟ ವಿಜಯ್ ದೇವರಕೊಂಡ ಜೊತೆ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ.
ಮುಂದಿನ ವರ್ಷದ ಆರಂಭದವರೆಗೂ ರಶ್ಮಿಕಾ ಮಂದಣ್ಣ ಅವರ ಡೇಟ್ಸ್ ಬುಕ್ ಆಗಿದೆ. ಆದ್ದರಿಂದ ‘ವೃತ್ರ’ ಸಿನಿಮಾ ಮಾಡಲು ಸಮಯದ ಅಭಾವದಿಂದ ಈ ಸಿನಿಮಾದಿಂದ ಹೊರ ಬಂದಿದ್ದಾರೆ.
ಜಾಹಿರಾತು: ಪಂಡೀತ್ ಸುದರ್ಶನ್ ಭಟ್
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…