ಬೆಂಗಳೂರು: ಸ್ಯಾಂಡಲ್ ವುಡ್ ಹಾಗೂ ಟಾಲಿವುಡ್ ನಲ್ಲಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ ಕನ್ನಡ ‘ವೃತ್ರ’ ಸಿನಿಮಾದಿಂದ ಹೊರ ಬಂದಿದ್ದಾರೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿತ್ತು. ಈಗ ಈ ಗಾಸಿಪ್ ಗಳಿಗೆ ಸ್ವತಃ ರಶ್ಮಿಕಾ ಮಂದಣ್ಣ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.
‘ವೃತ್ರ’ ಸಿನಿಮಾವನ್ನು ಗೌತಮ್ ಅಯ್ಯರ್ ನಿರ್ದೇಶನ ಮಾಡುತ್ತಿದ್ದರು. ಆದರೆ ರಶ್ಮಿಕಾ ಈ ಸಿನಿಮಾದಿಂದ ಹೊರ ಬಂದಿದ್ದರ ಬಗ್ಗೆ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. ”ನಾನು ‘ವೃತ್ರ’ ಸಿನಿಮಾದಲ್ಲಿ ಇರುವುದಿಲ್ಲ. ನನ್ನ ವೃತ್ತಿ ಜೀವನದ ಆರಂಭದಲ್ಲಿಯೇ ಈ ರೀತಿಯ ನಿರ್ಧಾರ ತೆಗೆದುಕೊಳ್ಳುವುದು ಉತ್ತಮವಲ್ಲ ಎಂದು ನಾನು ಭಾವಿಸಿದ್ದೇನೆ. ಆದ್ದರಿಂದ ಈ ಬಗ್ಗೆ ನಾನು ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕರ ಬಳಿ ಚರ್ಚೆ ಮಾಡಿದ್ದೇನೆ. ಅವರು ನನ್ನ ಪರಿಸ್ಥಿತಿಯನ್ನ ಅರ್ಥ ಮಾಡಿಕೊಂಡಿದ್ದಾರೆ. ಗೌತಮ್ ಹಾಗೂ ಚಿತ್ರ ತಂಡಕ್ಕೆ ನನ್ನ ಶುಭಾಶಯಗಳು ಮತ್ತು ಧನ್ಯವಾದಗಳು ” ಎಂದು ರಶ್ಮಿಕಾ ಮಂದಣ್ಣ ಬರೆದು ಟ್ವೀಟ್ ಮಾಡಿದ್ದಾರೆ.
‘ವೃತ್ರ’ ಸಿನಿಮಾಕ್ಕಾಗಿ ನಟಿ ರಶ್ಮಿಕಾ ಮಂದಣ್ಣ ಫೋಟೋ ಶೂಟ್ ಕೂಡ ಮಾಡಿಸಿದ್ದು, ರಶ್ಮಿಕಾ ಅವರ ಪೋಸ್ಟರ್ ಕೂಡ ರಿಲೀಸ್ ಆಗಿತ್ತು. ಈ ಸಿನಿಮಾದಲ್ಲಿ ರಶ್ಮಿಕಾಗೆ ತನಿಖಾ ಅಧಿಕಾರಿಯ ಪಾತ್ರದಲ್ಲಿ ಅಭಿನಯಿಸಬೇಕಿತ್ತು. ಆದರೆ ಈಗ ಅನಿವಾರ್ಯ ಕಾರಣಗಳಿಂದ ಕನ್ನಡ ಸಿನಿಮಾದಿಂದ ರಶ್ಮಿಕಾ ಹೊರ ಬಂದಿದ್ದಾರೆ.
ಸದ್ಯಕ್ಕೆ ರಶ್ಮಿಕಾ ಟಾಲಿವುಡ್ ನಲ್ಲಿ ಬಹು ಬೇಡಿಕೆ ನಟಿಯಾಗಿದ್ದು, ಈಗಾಗಲೇ ಎರಡು ತೆಲುಗು ಸಿನಿಮಾಗಳಲ್ಲಿ ನಟಿಸಿ ಯಶಸ್ಸು ಕಂಡಿದ್ದಾರೆ. ಈಗ ನಟ ನಾಗರ್ಜುನ್ ಮತ್ತು ನಾನಿ ಅಭಿನಯ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅಷ್ಟೇ ಅಲ್ಲದೇ ‘ಗೀತಾ ಗೋವಿಂದಂ’ ಸಿನಿಮಾದಲ್ಲಿ ಮಾಡಿದ್ದ ನಟ ವಿಜಯ್ ದೇವರಕೊಂಡ ಜೊತೆ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ.
ಮುಂದಿನ ವರ್ಷದ ಆರಂಭದವರೆಗೂ ರಶ್ಮಿಕಾ ಮಂದಣ್ಣ ಅವರ ಡೇಟ್ಸ್ ಬುಕ್ ಆಗಿದೆ. ಆದ್ದರಿಂದ ‘ವೃತ್ರ’ ಸಿನಿಮಾ ಮಾಡಲು ಸಮಯದ ಅಭಾವದಿಂದ ಈ ಸಿನಿಮಾದಿಂದ ಹೊರ ಬಂದಿದ್ದಾರೆ.
ಜಾಹಿರಾತು: ಪಂಡೀತ್ ಸುದರ್ಶನ್ ಭಟ್
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ…