ನವದೆಹಲಿ:ಎಲ್ಲ ರಾಜ್ಯ ಚುನಾವಣೆಗಳನ್ನು ಕೇವಲ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರೇ ಗೆಲ್ಲಿಸಲು ಸಾಧ್ಯವಿಲ್ಲ. ಬಿಜೆಪಿ ಇತರೆ ನಾಯಕರು ಶ್ರಮ ಹಾಕಬೇಕು ಎಂದು ಆರ್ ಎಸ್ಎಸ್ ಅಭಿಪ್ರಾಯ ಪಟ್ಟಿದೆ.
ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ತನ್ನ ಸಂಪಾದಕೀಯದಲ್ಲಿ ಈ ವಿಚಾರ ಪ್ರಸ್ತಾಪಿಸಿರುವ ಆರ್ ಎಸ್ಎಸ್, ದೆಹಲಿಯಲ್ಲಿ ಬಿಜೆಪಿ ತನ್ನ ಸಂಘಟನೆಯನ್ನು ಮತ್ತೆ ಆರಂಭಿಸಬೇಕು ಎಂದು ದೆಹಲಿ ಚುನಾವಣೆ ಫಲಿತಾಂಶ ಸ್ಪಷ್ಟ ಸಂದೇಶ ರವಾನಿಸಿದೆ ಎಂದು ಹೇಳಲಾಗಿದೆ.
ಬಿಜೆಪಿ 1700 ಅನಧಿಕೃತ ಕಾಲೊನಿಗಳನ್ನು ಅಧಿಕೃತ ಮಾಡಿ 40 ಲಕ್ಷ ಜನರಿಗೆ ನೆರವಾಗಿದ್ದರೂ ಆಮ್ ಆದ್ಮಿ ಪಕ್ಷ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದೆ. ಇದು 2015ರ ಚುನಾವಣೆ ನಂತರ ಬಿಜೆಪಿ ತಳಮಟ್ಟದಿಂದ ಪಕ್ಷವನ್ನು ಸಂಘಟಿಸುವಲ್ಲಿ ವಿಫಲವಾಗಿದೆ ಎಂಬುದನ್ನು ತೋರುತ್ತಿದೆ. ಇನ್ನು ಚುನಾವಣೆ ಅಂತಿಮ ಹಂತದಲ್ಲಿ ಪ್ರಚಾರ ಆರಂಭಿಸಿದ್ದು ಪಕ್ಷಕ್ಕೆ ಹಿನ್ನಡೆಯಾಗಿದೆ. ಹೀಗಾಗಿ ಕೇವಲ ನರೇಂದ್ರ ಮೋದಿ, ಅಮಿತ್ ಶಾ ಅವರ ಮೇಲೆ ಹೆಚ್ಚು ಜವಾಬ್ದಾರಿ ನೀಡದೆ ಪಕ್ಷದ ನಾಯಕರು ಶ್ರಮ ಹಾಕಬೇಕು ಎಂದು ಹೇಳಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…