ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್ಸಿ ಬಿ.ಕೆ ಹರಿಪ್ರಸಾದ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ವಂದೇ ಮಾತರಂ ಹೇಳಿ ರಾಷ್ಟ್ರಗೀತೆಯನ್ನು ಡೀ ಪ್ರಮೋಟ್ ಮಾಡಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ. ಆರ್ಎಸ್ಎಸ್ನ ಗೋಳವಲ್ಕರ್ ರಾಷ್ಟ್ರಗೀತೆಯ ಬಗ್ಗೆಯೇ ಅಪಸ್ವರ ಎತ್ತಿದ್ದರು. ಒಂದೇ ಒಂದು ದಿನವೂ ರಾಷ್ಟ್ರ ಗೀತೆಯನ್ನು ಅವರ ಸಂಘದಲ್ಲಿ ಹಾಡಿದವರಲ್ಲ. ಅದೇ ಕಾರಣಕ್ಕೆ ವಂದೇ ಮಾತರಂನ್ನು ಎಲ್ಲಾ ಕಡೆ ಕಡ್ಡಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:
ಮೊದಲು ವಂದೇ ಮಾತರಂ, ಬಳಿಕ ರಾಷ್ಟ್ರಗೀತೆ ಹಾಡುವುದು ರಾಷ್ಟ್ರಗೀತೆಗೆ ಅಪಮಾನ ಮಾಡಿದ ಹಾಗೆ. ಬಿಜೆಪಿ ಸರ್ಕಾರ ನಮ್ಮ ಶಿಷ್ಟಾಚಾರಕ್ಕೆ ಅಪಮಾನ ಮಾಡುತ್ತಿದೆ. ಬಿಜೆಪಿಯವರು ರಾಷ್ಟ್ರಗೀತೆಯ ವಿರುದ್ಧವೇ ಹೋಗ್ತಿದ್ದಾರೆ. ವಂದೇ ಮಾತರಂ ಬೆಂಗಾಲ್ ಪ್ರಾಂತ್ಯದ ರಾಷ್ಟ್ರಗೀತೆ ಆಗಿತ್ತೇ ವಿನಃ ಇಡೀ ದೇಶದ ರಾಷ್ಟ್ರಗೀತೆ ಆಗಿರಲಿಲ್ಲ. ಬೆಂಗಾಲ್ ಚುನಾವಣೆ ಸಲುವಾಗಿ ವಂದೇ ಮಾತರಂ ಕಡ್ಡಾಯ ಮಾಡ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ದೇವರ ಹೆಸರು ಕೂಡ ವಂದೇ ಮಾತರಂನಲ್ಲಿದೆ. ಎಲ್ಲ ಧರ್ಮದವರೂ ಈ ದೇಶದಲ್ಲಿ ಇರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ. ಕೆಟ್ಟ ಭಾವನೆಗಳನ್ನು ಕೆರಳಿಸಲು, ಕೋಮು ಭಾವನೆ ಕೆರಳಿಸಲು ಇದನ್ನು ತಂದಿದ್ದಾರೆ. ಇದೂ ಕೂಡ ಚುನಾವಣಾ ಗಿಮಿಕ್ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…