ಉಡುಪಿ: ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಬಸ್ಗಳು ಸೇರಿದಂತೆ ಎಲ್ಲಾ ಬಸ್ಗಳಿಗೆ ತಾಂತ್ರಿಕ ಹಾಗೂ ಇತರ ಕಾರಣಗಳಿಗಾಗಿ ಕಡ್ಡಾಯವಾಗಿ ಬಾಗಿಲು ಅಳವಡಿಕೆಗೆ ನೀಡಿರುವ ಕಾಲಾವಕಾಶವನ್ನು ಜೂನ್ 1ರವರೆಗೆ ವಿಸ್ತರಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಜ.29 ರಂದು ಬಸ್ ಮಾಲಕರ ಸಂಘದೊಂದಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧ್ಯಕ್ಷತೆಯಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಎಸ್ಪಿ ಅವರು ತಿಳಿಸಿದ್ದಾರೆ.
ಮಾರ್ಚ್ ತಿಂಗಳವರೆಗೆ ಶಾಲೆಗಳು ಹಾಗೂ ಮಕ್ಕಳಿಗೆ ಪರೀಕ್ಷೆಗಳು ನಡೆಯಲಿರುವುದರಿಂದ ಹಾಗೂ ಜಿಲ್ಲೆಯ ಖಾಸಗಿ ಸೇರಿದಂತೆ ಎಲ್ಲಾ ಬಸ್ಗಳಿಗೆ ಹೊಸದಾಗಿ ಬಾಗಿಲುಗಳನ್ನು ಅಳವಡಿಸಲು ಸಾಕಷ್ಟು ಸಂಖ್ಯೆಯಲ್ಲಿ ಗ್ಯಾರೇಜ್ಗಳು ಇಲ್ಲದೇ ಇರುವುದರಿಂದ ಬಸ್ ಚಾಲಕರು ಹಾಗೂ ಮಾಲಕರ ಕೋರಿಕೆಯ ಮೇರೆಗೆ ಫೋಲ್ಡಿಂಗ್ ಮಾದರಿಯ ಬಾಗಿಲುಗಳನ್ನು ಅಳವಡಿಸಲು ಜೂನ್ 1ರವರೆಗೆ ಸಮಯವನ್ನು ನೀಡಲಾಯಿತು ಎಂದು ಅವರು ತಿಳಿಸಿದರು. ಆದರೆ ಇಂದಿನಿಂದಲೇ ಎಲ್ಲಾ ಬಸ್ಗಳ ದೃಢತೆ ಸರ್ಟಿಫಿಕೇಟ್ (ಫಿಟ್ನೆಸ್ ಸರ್ಟಿಫಿಕೇಟ್-ಎಫ್ಸಿ)ಗಳನ್ನು ನವೀಕರಿಸಲಾಗುವುದು. ಇದಕ್ಕೆ ಮುನ್ನ ಬಸ್ಗೆ ಜೂನ್ 1ರೊಳಗೆ ಪೋಲ್ಡಿಂಗ್ ಮಾದರಿಯ ಬಾಗಿಲನ್ನು ಅಳವಡಿಸದಿದ್ದರೆ ಎಫ್ಸಿಯನ್ನು ರದ್ದುಪಡಿಸುವ ಷರತ್ತನ್ನು ವಿಧಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಅಳವಡಿಸಿಕೊಳ್ಳದಿದ್ದರೆ ಮುಟ್ಟು ಗೋಲು:
ಅಲ್ಲದೇ ಜೂನ್1ರ ಬಳಿಕ ಯಾವುದೇ ಬಸ್ ಸುಸಜ್ಜಿತ ಬಾಗಿಲನ್ನು ಅಳವಡಿಸಿಕೊಳ್ಳದೇ ಇದ್ದರೆ ಅದನ್ನು ಮುಟ್ಟು ಗೋಲು ಹಾಕಿಕೊಳ್ಳುವ ಷರತ್ತಿಗೂ ಎಲ್ಲಾ ಖಾಸಗಿ ಬಸ್ಗಳ ಮಾಲಕರು ಸಂಪೂರ್ಣ ಒಪ್ಪಿಗೆಯನ್ನು ಸೂಚಿಸಿದ್ದು, ಜಿಲ್ಲಾಡಳಿತದ ಷರತ್ತನ್ನು ಶೇ.100ರಷ್ಟು ಅನುಷ್ಠಾನಗೊಳಿಸುವ ಭರವಸೆಯನ್ನೂ ಅವರು ನೀಡಿದ್ದಾರೆ ಎಂದು ಹರಿರಾಮ್ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…