Featured

ಎಲ್ಲಾ ಬಸ್ ಗಳಲ್ಲಿ ಬಾಗಿಲು ಅಳವಡಿಕೆಗೆ ಜೂ.1ರವರೆಗೆ ಕಾಲಾವಕಾಶ: ಉಡುಪಿ ಎಸ್ಪಿ ಹರಿರಾಮ್ ಶಂಕರ್ – vishwanews24

ಎಲ್ಲಾ ಬಸ್ ಗಳಲ್ಲಿ ಬಾಗಿಲು ಅಳವಡಿಕೆಗೆ ಜೂ.1ರವರೆಗೆ ಕಾಲಾವಕಾಶ: ಉಡುಪಿ ಎಸ್ಪಿ ಹರಿರಾಮ್ ಶಂಕರ್

ಉಡುಪಿ: ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳು ಸೇರಿದಂತೆ ಎಲ್ಲಾ ಬಸ್‌ಗಳಿಗೆ ತಾಂತ್ರಿಕ ಹಾಗೂ ಇತರ ಕಾರಣಗಳಿಗಾಗಿ ಕಡ್ಡಾಯವಾಗಿ ಬಾಗಿಲು ಅಳವಡಿಕೆಗೆ ನೀಡಿರುವ ಕಾಲಾವಕಾಶವನ್ನು ಜೂನ್ 1ರವರೆಗೆ ವಿಸ್ತರಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಜ.29 ರಂದು ಬಸ್ ಮಾಲಕರ ಸಂಘದೊಂದಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧ್ಯಕ್ಷತೆಯಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಎಸ್ಪಿ ಅವರು ತಿಳಿಸಿದ್ದಾರೆ.

ಮಾರ್ಚ್ ತಿಂಗಳವರೆಗೆ ಶಾಲೆಗಳು ಹಾಗೂ ಮಕ್ಕಳಿಗೆ ಪರೀಕ್ಷೆಗಳು ನಡೆಯಲಿರುವುದರಿಂದ ಹಾಗೂ ಜಿಲ್ಲೆಯ ಖಾಸಗಿ ಸೇರಿದಂತೆ ಎಲ್ಲಾ ಬಸ್‌ಗಳಿಗೆ ಹೊಸದಾಗಿ ಬಾಗಿಲುಗಳನ್ನು ಅಳವಡಿಸಲು ಸಾಕಷ್ಟು ಸಂಖ್ಯೆಯಲ್ಲಿ ಗ್ಯಾರೇಜ್‌ಗಳು ಇಲ್ಲದೇ ಇರುವುದರಿಂದ ಬಸ್ ಚಾಲಕರು ಹಾಗೂ ಮಾಲಕರ ಕೋರಿಕೆಯ ಮೇರೆಗೆ ಫೋಲ್ಡಿಂಗ್ ಮಾದರಿಯ ಬಾಗಿಲುಗಳನ್ನು ಅಳವಡಿಸಲು ಜೂನ್ 1ರವರೆಗೆ ಸಮಯವನ್ನು ನೀಡಲಾಯಿತು ಎಂದು ಅವರು ತಿಳಿಸಿದರು. ಆದರೆ ಇಂದಿನಿಂದಲೇ ಎಲ್ಲಾ ಬಸ್‌ಗಳ ದೃಢತೆ ಸರ್ಟಿಫಿಕೇಟ್ (ಫಿಟ್‌ನೆಸ್ ಸರ್ಟಿಫಿಕೇಟ್-ಎಫ್‌ಸಿ)ಗಳನ್ನು ನವೀಕರಿಸಲಾಗುವುದು. ಇದಕ್ಕೆ ಮುನ್ನ ಬಸ್‌ಗೆ ಜೂನ್ 1ರೊಳಗೆ ಪೋಲ್ಡಿಂಗ್ ಮಾದರಿಯ ಬಾಗಿಲನ್ನು ಅಳವಡಿಸದಿದ್ದರೆ ಎಫ್‌ಸಿಯನ್ನು ರದ್ದುಪಡಿಸುವ ಷರತ್ತನ್ನು ವಿಧಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಅಳವಡಿಸಿಕೊಳ್ಳದಿದ್ದರೆ ಮುಟ್ಟು ಗೋಲು:

ಅಲ್ಲದೇ ಜೂನ್‌1ರ ಬಳಿಕ ಯಾವುದೇ ಬಸ್ ಸುಸಜ್ಜಿತ ಬಾಗಿಲನ್ನು ಅಳವಡಿಸಿಕೊಳ್ಳದೇ ಇದ್ದರೆ ಅದನ್ನು ಮುಟ್ಟು ಗೋಲು ಹಾಕಿಕೊಳ್ಳುವ ಷರತ್ತಿಗೂ ಎಲ್ಲಾ ಖಾಸಗಿ ಬಸ್‌ಗಳ ಮಾಲಕರು ಸಂಪೂರ್ಣ ಒಪ್ಪಿಗೆಯನ್ನು ಸೂಚಿಸಿದ್ದು, ಜಿಲ್ಲಾಡಳಿತದ ಷರತ್ತನ್ನು ಶೇ.100ರಷ್ಟು ಅನುಷ್ಠಾನಗೊಳಿಸುವ ಭರವಸೆಯನ್ನೂ ಅವರು ನೀಡಿದ್ದಾರೆ ಎಂದು ಹರಿರಾಮ್ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

3 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

3 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

3 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

4 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago