ಮುಂಬೈ: ಯುಪಿಐ ಸೌಲಭ್ಯ(UPI facility) ಬಳಸಿಕೊಂಡು ಎಲ್ಲಾ ಬ್ಯಾಂಕುಗಳ ಎಟಿಎಂಗಳಲ್ಲಿ ಕಾರ್ಡು ಬಳಸದೆ ನಗದು ಹಿಂಪಡೆಯುವ ವ್ಯವಸ್ಥೆಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಸದ್ಯದಲ್ಲಿಯೇ ಜಾರಿಗೆ ತರಲಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
ಪ್ರಸ್ತುತ, ಎಟಿಎಂ ಮೂಲಕ ಕಾರ್ಡ್ ರಹಿತವಾಗಿ ನಗದು ಹಿಂಪಡೆಯುವ ಸೌಲಭ್ಯವು ಕೆಲವು ಬ್ಯಾಂಕ್ಗಳಿಗೆ ಮಾತ್ರ ಸೀಮಿತವಾಗಿದೆ. UPI ಬಳಸಿಕೊಂಡು ಎಲ್ಲಾ ಬ್ಯಾಂಕ್ಗಳು ಮತ್ತು ATM ನೆಟ್ವರ್ಕ್ಗಳಲ್ಲಿ ಕಾರ್ಡುರಹಿತವಾಗಿ ಹಣ ಹಿಂಪಡೆಯುವ ಸೌಲಭ್ಯಗಳನ್ನು ಲಭ್ಯವಾಗುವಂತೆ ಮಾಡಲು ಈಗ ಪ್ರಸ್ತಾಪಿಸಲಾಗಿದೆ. ವಹಿವಾಟಿನ ಸುಲಭತೆಯನ್ನು ಹೆಚ್ಚಿಸುವುದರ ಜೊತೆಗೆ, ಅಂತಹ ವಹಿವಾಟುಗಳಿಗೆ ಕಾರ್ಡ್ಗಳ ಅಗತ್ಯವಿಲ್ಲದಿರುವುದು ಕಾರ್ಡ್ ಸ್ಕಿಮ್ಮಿಂಗ್, ಕಾರ್ಡ್ ಕ್ಲೋನಿಂಗ್ ಮುಂತಾದ ವಂಚನೆಗಳನ್ನು ಕಡಿಮೆ ಮಾಡುತ್ತದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಇಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಇಂದು ಮುಂಬೈಯಲ್ಲಿ ಹಣಕಾಸು ನೀತಿ ಪರಾಮರ್ಶೆಯಲ್ಲಿ ವಿತ್ತೀಯ ನೀತಿ ಪ್ರಕಟಿಸುವ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಿರುವ ಆರ್ ಬಿಐ ಗವರ್ನರ್ ವಿವರಣೆ ನೀಡಿದ್ದಾರೆ. ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಬಳಕೆಯ ಮೂಲಕ ಗ್ರಾಹಕರ ದೃಢೀಕರಣವನ್ನು ಸಕ್ರಿಯಗೊಳಿಸಲು ಪ್ರಸ್ತಾಪಿಸಲಾಗಿದೆ. ಆದರೆ ಅಂತಹ ವಹಿವಾಟುಗಳು ಎಟಿಎಂ ನೆಟ್ವರ್ಕ್ಗಳ ಮೂಲಕ ನಡೆಯುತ್ತದೆ ಎಂದು ಅಭಿವೃದ್ಧಿ ಮತ್ತು ನಿಯಂತ್ರಣ ನೀತಿಗಳ ಹೇಳಿಕೆ ತಿಳಿಸಿದೆ. ಎನ್ಪಿಸಿಐ, ಎಟಿಎಂ ನೆಟ್ವರ್ಕ್ಗಳು ಮತ್ತು ಬ್ಯಾಂಕ್ಗಳಿಗೆ ಶೀಘ್ರದಲ್ಲೇ ಪ್ರತ್ಯೇಕ ಸೂಚನೆಗಳನ್ನು ನೀಡಲಾಗುವುದು ಎಂದು ಅದು ಹೇಳಿದೆ.
ಭಾರತ್ ಬಿಲ್ ಪಾವತಿ ವ್ಯವಸ್ಥೆಗೆ (BBPS) ಸಂಬಂಧಿಸಿದಂತೆ, ಬಿಲ್ ಪಾವತಿಗೆ ಇದು ಇಂಟರ್ಆಪರೇಬಲ್ ಪ್ಲಾಟ್ಫಾರ್ಮ್ ಆಗಿದೆ, ವರ್ಷಗಳಲ್ಲಿ ಬಿಲ್ ಪಾವತಿ ಮತ್ತು ಬಿಲ್ಲರ್ಗಳ ಪ್ರಮಾಣದಲ್ಲಿ ಹೆಚ್ಚಳವನ್ನು ಕಂಡಿದೆ.BBPS ಮೂಲಕ ಬಿಲ್ ಪಾವತಿಗಳನ್ನು ಇನ್ನಷ್ಟು ಸುಲಭಗೊಳಿಸಲು ಮತ್ತು BBPS ನಲ್ಲಿ ಹೆಚ್ಚಿನ ಸಂಖ್ಯೆಯ ಬ್ಯಾಂಕೇತರ ಭಾರತ್ ಬಿಲ್ ಪಾವತಿ ಕಾರ್ಯಾಚರಣಾ ಘಟಕಗಳ ಭಾಗವಹಿಸುವಿಕೆಯನ್ನು ಉತ್ತೇಜಿಸಲು, ಅಂತಹ ಘಟಕಗಳ ನಿವ್ವಳ ಮೌಲ್ಯದ ಅಗತ್ಯವನ್ನು 100 ಕೋಟಿಯಿಂದ ರೂಪಾಯಿಗಳಿಂದ 25 ಕೋಟಿ ರೂಪಾಯಿಗಳಿಗೆ ತಗ್ಗಿಸಲು ನಿಯಮಾವಳಿಗಳಿಗೆ ಅಗತ್ಯ ತಿದ್ದುಪಡಿಯನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ಸಹ ಶಕ್ತಿಕಾಂತ್ ದಾಸ್ ತಿಳಿಸಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…