Featured

ಎಲ್ಲಾ ಭಾಷೆಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಕಾಂತಾರ ಡಿ. 2 ರಂದು ತುಳುವಿನಲ್ಲಿ ರಿಲೀಸ್‌ – Vishwanews24

ಎಲ್ಲಾ ಭಾಷೆಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಕಾಂತಾರ ಡಿ. 2 ರಂದು ತುಳುವಿನಲ್ಲಿ ರಿಲೀಸ್‌

ಬೆಂಗಳೂರು : ಕೊನೆಗೂ ತುಳು ಭಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಡಿಸೆಂಬರ್ 2 ರಂದು ತುಳು ಬಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಯಾಗಲಿದೆ. ಕಾಂತಾರ ಇದೀಗ ಬಿಡುಗಡೆಯಾದ ಎಲ್ಲಾ ಭಾಷೆಗಳಲ್ಲಿ ಭರ್ಜರಿಯಾಗಿ ಪ್ರದರ್ಶನ ಕಾಣುತ್ತಿದ್ದು, ಇದೀಗ ಓಟಿಟಿಯಲ್ಲೂ ಕಾಂತಾರ ಸಿನೆಮಾ ಬಿಡುಗಡೆಯಾಗಿದ್ದು, ಇದೀಗ ತುಳುವಿನಲ್ಲಿ ಕಾಂತಾರದ ಟ್ರೈಲರ್ ಬಿಡುಗಡೆಯಾಗಿದೆ.

ಕಾಂತಾರ ಸಿನಿಮಾ ದೈವಗಳ ಕಥೆ ಹೊಂದಿತ್ತು. ಕರಾವಳಿ ಭಾಗದ ಹಿನ್ನೆಲೆಯಿಂದ ರೂಪುಗೊಂಡ ಈ ಸಿನಿಮಾ, ಬಿಡುಗಡೆಯಾದ ಆರಂಭದಿಂದಲೂ ತುಳು ಭಾಷೆಗೆ ಡಬ್​ ಆಗಬೇಕು ಎಂಬ ಆಗ್ರಹ ಆರಂಭವಾಗಿತ್ತು. ಅಂತೆಯೇ ಸಿನಿಮಾ ತಂಡ ಕೂಡ ತುಳು ಭಾಷೆಗೆ ಡಬ್ಬಿಂಗ್ ಆಗುತ್ತಿರುವ ಮಾಹಿತಿ ಹಂಚಿಕೊಂಡಿತ್ತು.

ಡಿಸೆಂಬರ್ 2 ರಂದು ದೇಶದಾದ್ಯಂತ ಕಾಂತಾರ ಸಿನಿಮಾ ತುಳು ಭಾಷೆಯಲ್ಲಿ ಬಿಡುಗಡೆಯಾಗುವುದಾಗಿ ಹೊಂಬಾಳೆ ಫಿಲ್ಮ್ಸ್ ಹೇಳಿಕೊಂಡಿದೆ. ಅಂತೆಯೇ ನವೆಂಬರ್ 25 ರಿಂದ ಹೊರದೇಶಗಳಲ್ಲಿ ಕಾಂತಾರ ತುಳು ಅವತರಣಿಕೆ ಬಿಡುಗಡೆಯಾಗುತ್ತಿದೆ.

ತುಳು ರಂಗಭೂಮಿಯ ಹಿರಿಯ, ಜನಪ್ರಿಯ ಕಲಾವಿದ ಡಾ.ದೇವದಾಸ್ ಕಾಪಿಕಾಡ್, ಅಚ್ಯುತ್ ಕುಮಾರ್ ಅವರ ಪಾತ್ರಕ್ಕೆ ಧ್ವನಿ ನೀಡಿದ್ದಾರೆ. ತುಳು ಸಿನಿಮಾ ನಟ ಅರ್ಜುನ್ ಕಾಪಿಕಾಡ್ ರಿಷಬ್ ಶೆಟ್ಟಿ ಪಾತ್ರಕ್ಕೆ ಧ್ವನಿಯಾಗಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

4 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

5 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

5 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

5 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago