Featured

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಟೀಮ್‌ ಇಂಡಿಯಾದ ಸ್ಪಿನ್ನರ್‌ ಅಮಿತ್ ಮಿಶ್ರಾ – vishwanews24

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಟೀಮ್‌ ಇಂಡಿಯಾದ ಸ್ಪಿನ್ನರ್‌ ಅಮಿತ್ ಮಿಶ್ರಾ

ನವದೆಹಲಿ: ಟೀಮ್‌ ಇಂಡಿಯಾದ ಹಿರಿಯ ಸ್ಪಿನ್ನರ್‌ ಅಮಿತ್ ಮಿಶ್ರಾ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ಗುರುವಾರ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ತಮ್ಮ 25 ವರ್ಷಗಳ ಕ್ರಿಕೆಟ್‌ ವೃತ್ತಿಜೀವನಕ್ಕೆ ತೆರೆ ಎಳೆದರು. ಮಿಶ್ರಾ 22 ಟೆಸ್ಟ್, 36 ಏಕದಿನ ಮತ್ತು 10 ಟಿ20 ಗಳಲ್ಲಿ ಭಾರತವನ್ನು ಪ್ರತಿನಿಧಿಸಿ ಒಟ್ಟು 156 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

2003 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಅವರು, 2008 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಆ ಪಂದ್ಯದಲ್ಲಿ ಅವರು ಐದು ವಿಕೆಟ್ ಗೊಂಚಲು (5/71) ಸೇರಿ ಒಟ್ಟು 7 ವಿಕೆಟ್‌ ಉರುಳಿಸಿ ಭಾರತದ 320 ರನ್‌ಗಳ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

“ಇಂದು, 25 ವರ್ಷಗಳ ನಂತರ, ನಾನು ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸುತ್ತಿದ್ದೇನೆ. ನನ್ನ ಮೊದಲ ಪ್ರೀತಿ ಮತ್ತು ನನ್ನ ಅತ್ಯಂತ ಸಂತೋಷದ ಮೂಲವಾಗಿದ್ದ ಆಟ. ಈ ಪ್ರಯಾಣವು ಲೆಕ್ಕವಿಲ್ಲದಷ್ಟು ಭಾವನೆಗಳಿಂದ ತುಂಬಿದೆ. ಹೆಮ್ಮೆ, ಕಷ್ಟ, ಕಲಿಕೆ ಮತ್ತು ಪ್ರೀತಿಯ ಕ್ಷಣಗಳು. ಬಿಸಿಸಿಐ, ಹರಿಯಾಣ ಕ್ರಿಕೆಟ್ ಅಸೋಸಿಯೇಷನ್, ನನ್ನ ತರಬೇತುದಾರರು, ಬೆಂಬಲ ಸಿಬ್ಬಂದಿ, ಸಹೋದ್ಯೋಗಿಗಳು ಮತ್ತು ಮುಖ್ಯವಾಗಿ, ಅಭಿಮಾನಿಗಳಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ, ಅವರ ನಂಬಿಕೆ ಮತ್ತು ಬೆಂಬಲವು ಪ್ರತಿ ಹಂತದಲ್ಲೂ ನನಗೆ ಬಲವನ್ನು ನೀಡಿತು” ಎಂದು ಮಿಶ್ರಾ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

10 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

11 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

11 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

13 hours ago