Featured

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಎಬಿ ಡಿವಿಲಿಯರ್ಸ್ – Vishwanews24

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಎಬಿ ಡಿವಿಲಿಯರ್ಸ್ – Vishwanews24

ನವದೆಹಲಿ : ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇವರು 2018 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು

ದಕ್ಷಿಣ ಆಫ್ರಿಕಾ ಮೂಲದ ಈ ದಿಗ್ಗಜ ಆಟಗಾರ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಈಗಾಗಲೇ ನಿವೃತ್ತಿಯನ್ನು ಪಡೆದಿದ್ದರು. ಆದರೆ ಲೀಗ್ ಕ್ರಿಕೆಟ್‌ಗಳ ಮೂಲಕ ಸಕ್ರಿಯವಾಗಿದ್ದು ಅಭಿಮಾನಿಗಳನ್ನು ರಂಜಿಸುತ್ತಿದ್ದರು. ಕಳೆದ ಹಲವು ವರ್ಷಗಳಿಮದ ಆರ್‌ಸಿಬಿ ಪರವಾಗಿ ಐಪಿಎಲ್‌ನಲ್ಲಿ ಆಡುತ್ತಿದ್ದ ಎಬಿ ಡಿವಿಲಿಯರ್ಸ್ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳನ್ನು ಹೊಂದಿದ್ದಾರೆ. ಇದೊಂದು ಅದ್ಭುತವಾದ ಪ್ರಯಾಣವಾಗಿದ್ದು ಈಗ ನಾನು ಎಲ್ಲಾ ಮಾದರಿಯ ಕ್ರಿಕೆಟ್‌ಗೂ ನಿವೃತ್ತಿಯನ್ನು ಘೋಷಿಸುತ್ತಿದ್ದೇನೆ ಎಂದು ಎಬಿ ಡಿವಿಲಿಯರ್ಸ್ ಘೋಷಿಸಿದ್ದಾರೆ.

 

ಕ್ರಿಕೆಟ್ ನನಗೆ ಅಪಾರವಾದ ಕರುಣೆ ತೋರಿಸಿದೆ. ನಾನು ಟೈಟಾನ್ಸ್ ಪರವಾಗಿ ಆಡುವಾಗ ಅಥವಾ ಪ್ರೊಟೀಸ್ ಪರವಾಗಿ ಅಥವಾ ಆರ್‌ಸಿಬಿ ಪರವಾಗಿ ಆಡುವಾದ ಅಥವಾ ವಿಶ್ವಾದ್ಯಂತ ಆಡುವಾಗ ಈ ಕ್ರೀಡೆ ನನಗೆ ಊಹಿಸಲೂ ಸಾಧ್ಯವಾಗದ ಅನುಭವ ಹಾಗೂ ಅವಕಾಶವನ್ನು ನೀಡಿದೆ. ಅದಕ್ಕಾಗಿ ನಾನು ಯಾವಾಗಲೂ ಕೃತಜ್ಞನಾಗಿರುತ್ತೇನೆ” ಎಂದಿದ್ದಾರೆ ಎಬಿ ಡಿವಿಲಿಯರ್ಸ್.

ಕೊನೆಯದಾಗಿ ತನಗೆ ಸಹಕಾರ ನೀಡಿದ ಕುಟುಂಬಕ್ಕೆ ಎಬಿ ಡಿವಿಲಿಯರ್ಸ್ ಧನ್ಯವಾದ ಸಲ್ಲಿಸಿದ್ದಾರೆ. “ಅಂತಿಮವಾಗಿ, ನನ್ನ ಕುಟುಂಬ ನನ್ನ ಹೆತ್ತವರು, ನನ್ನ ಸೋದರರು, ನನ್ನ ಪತ್ನಿ ಡೇನಿಯೆಲ್ ಹಾಗೂ ನನ್ನ ಮಕ್ಕಳು ನನಗಾಗಿ ತ್ಯಾಗವನ್ನು ಮಾಡದಿದ್ದರೆ ನನ್ನಿಂದ ಈ ಸಾಧನೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ನಾನೀನ ಮುಂದಿನ ಅಧ್ಯಾಯವನ್ನು ಎದುರು ನೋಡುತ್ತಿದ್ದೇನೆ” ಎಂದು ಟ್ವಿಟ್ಟರ್‌ನಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿ ಎಬಿ ಡಿವಿಲಿಯರ್ಸ್ ಹಂಚಿಕೊಂಡಿದ್ದಾರೆ. ಇನ್ನು ಈ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಹಾಗೂ ಭಾರತದಲ್ಲಿ ಪಡೆದುಕೊಂಡ ಬೆಂಬಲಕ್ಕೆ ಆಭಾರಿಯಾಗಿರುತ್ತೇನೆ ಎಂದಿದ್ದಾರೆ. 2008ರಿಂದಲೂ ಐಪಿಎಲ್‌ನಲ್ಲಿ ಸಕ್ರಿಯ: ಎಬಿ ಡಿವಿಲಿಯರ್ಸ್ ಐಪಿಎಲ್‌ನ ಆರಂಭಿಕ ಆವೃತ್ತಿಯಿಂದಲೂ ಸಕ್ರಿಯವಾಗಿದ್ದಾರೆ. ಐಪಿಎಲ್‌ನಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಪರವಾಗಿ ಆರಂಭಿಕ ಮೂರು ಆವೃತ್ತಿಗಳಲ್ಲಿ ಕಣಕ್ಕಿಳಿದಿದ್ದರು. ನಂತರ 2011ರ ಆವೃತ್ತಿಯಲ್ಲಿ 5 ಕೋಟಿ ಮೊತ್ತಕ್ಕೆ ಆರ್‌ಸಬಿ ಪಾಲಾದರು. ಅದಾದ ಬಳಿಕ ಆರ್‌ಸಿಬಿ ತಂಡದ ಅವಿಭಾಜ್ಯ ಅಂಗವಾಗಿದ್ದಾರೆ ಎಬಿ ಡಿವಿಲಿಯರ್ಸ್. ಅನೇಕ ಪಮದ್ಯಗಳಲ್ಲಿ ಏಕಾಂಗಿಯಾಗಿ ಹೋರಾಡಿ ಗೆಲುವು ತಂದುಕೊಟ್ಟಿದ್ದಾರೆ ಎಬಿ ಡಿವಲಿಯರ್ಸ್

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

8 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

8 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

8 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

8 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

12 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

12 hours ago