Featured

ಎಲ್ಲಾ ರಂಗಗಳಲ್ಲೂ ಬಿಜೆಪಿ ವಿಫಲ , ಈಗ ಚುನಾವಣೆ ನಡೆದರೆ ಕಾಂಗ್ರೆಸ್ ಗೆಲುವು ಖಚಿತ’ : ಸಿದ್ದರಾಮಯ್ಯ – Vishwanews24

ಎಲ್ಲಾ ರಂಗಗಳಲ್ಲೂ ಬಿಜೆಪಿ ವಿಫಲ , ಈಗ ಚುನಾವಣೆ ನಡೆದರೆ ಕಾಂಗ್ರೆಸ್ ಗೆಲುವು ಖಚಿತ’ : ಸಿದ್ದರಾಮಯ್ಯ – Vishwanews24

ಬೆಂಗಳೂರು: “ಬಿಜೆಪಿ ಸರ್ಕಾರವು ಎಲ್ಲಾ ರಂಗಗಳಲ್ಲೂ ವಿಫಲವಾಗಿದ್ದು, ಈಗ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆದರು ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ಗೆಲ್ಲುವುದು ಖಚಿತ, ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ” ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, “ಯಡಿಯೂರಪ್ಪ ಅವರ ವೈಪಲ್ಯದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಗೊತ್ತಾಗಿದೆ, ರಾಜ್ಯದ ನಾಯಕರಿಗೂ ಗೊತ್ತಿದೆ. ಜನರಿಗೂ ಅವರ ನಾಟಕ ತಿಳಿಸಿದೆ. ಅದಕ್ಕಾಗಿ ಬಿಎಸ್‌ವೈಯವರು ರಾಜೀನಾಮೆಯ ನಾಟಕ ಆಡುತ್ತಿದ್ದಾರೆ” ಎಂದರು.

“ಯಡಿಯೂರಪ್ಪ ರಾಜ್ಯ ಕಂಡ ಕಳಪೆ ಮುಖ್ಯಮಂತ್ರಿ. ಅವರನ್ನು ಅಧಿಕಾರದಿಂದ ಕೆಳಗಿಸಬೇಕು ಎಂದು ಬಿಜೆಪಿಯಲ್ಲಿ ಹೊಸದಾಗಿ ಚರ್ಚೆಯಾಗುತ್ತಿಲ್ಲ. ಮೊದಲಿನಿಂದಲೂ ಚರ್ಚೆ ನಡೆಯುತ್ತಿದೆ. ಆದರೆ ಪರ್ಯಾಯ ನಾಯಕ ಯಾರು ಎನ್ನುವ ಚಿಂತೆ ಬಿಜೆಪಿಯನ್ನು ಕಾಡುತ್ತಿರುವುದರಿಂದ ಇಲ್ಲಿಯವರೆಗೆ ಸುಮ್ಮನಿದ್ದಾರೆ” ಎಂದಿದ್ದಾರೆ.

ಇನ್ನು “ಹೈಕಮಾಂಡ್ ನಾಯಕರ ಮನವೋಲಿಸುವುದಕ್ಕಾಗಿ ಯಡಿಯೂರಪ್ಪ ಅನೇಕ ರೀತಿಯ ಸರ್ಕಸ್ ಮಾಡುತ್ತಿದ್ದಾರೆ. ಪಕ್ಷಕ್ಕೆ ನಿಷ್ಠನಾಗಿದ್ದೇನೆ ಎಂದು ತೋರಿಸುವ ಪಯತ್ನವಾಗಿ ರಾಜಿನಾಮೆ ನೀಡಲು ಸಿದ್ಧ ಎಂದಿದ್ದಾರೆ. ನಾವೇನು‌ ಸರ್ಕಾರ ಬೀಳಿಸಲ್ಲ, ಅವರಾಗಿ ಬಿದ್ದು ಹೋದರೆ ಸರ್ಕಾರ ರಚಿಸಲು ನಾವು ರೆಡಿ” ಎಂದು ಹೇಳಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

11 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

11 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

11 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

12 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

12 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago