ಮಂಗಳೂರು: ಎಸ್ಡಿಪಿಐ ನಾಯಕರನ್ನು ಬಂಧಿಸಿ ಪಕ್ಷವನ್ನು ದಮನಿಸುವ ಕೆಲಸ ನಡೆಯುತ್ತಿದೆ. 16 ಸೇವಾ ಕೇಂದ್ರಗಳಿಗೆ ಎನ್ಐಎ ಬೀಗ ಜಡಿದಿರುವುದು ಯಾಕೆ..? ಇಂದು ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ನಡೆಯುತ್ತದೆ. ಮುಂದಿನ ದಿನಗಳಲ್ಲಿ ಎಸ್ಡಿಪಿಐ ಎಲ್ಲೆಡೆ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಎಸ್.ಡಿ.ಪಿ.ಐ ದ.ಕ.ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್ಡಿಪಿಐ ಮುಖಂಡ ಶಾಫಿ ಬೆಳ್ಳಾರೆ, ಇಕ್ಬಾಲ್ ಬೆಳ್ಳಾರೆ ಎಲ್ಲೂ ತಲೆಮರೆಸಿಕೊಂಡಿರಲಿಲ್ಲ. ಸಾರ್ವಜನಿಕವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸ್ತಾ ಇದ್ರು. ಯಾಕಾಗಿ ಇವ್ರನ್ನು ಈ ರೀತಿ ಬಂಧಿಸಬೇಕಿತ್ತು. ಮುಖಂಡರನ್ನು ವಿಚಾರಣೆಗೆ ಕರೆದ್ರೆ ಅವ್ರೇ ಬರ್ತಾರೆ.
ಚಿಕ್ಕಮಗಳೂರು: ಅಪರೂಪದ ಜಾತ್ರೆ.. ಮಹಾಮಂಗಳಾರತಿ ವೇಳೆ ಅಲುಗಾಡುತ್ತೆ 16 ಅಡಿ ಎತ್ತರದ ಬೃಹತ್ ಹುತ್ತ – Vishwanews24
ಅದು ಬಿಟ್ಟು ಸಾರ್ವಜನಿಕ ವಾಹನದಲ್ಲಿ ಬರುವ ವೇಳೆ ಯಾಕೆ ಬಂಧಿಸಬೇಕಿತ್ತು. ರಾಜ್ಯದಾದ್ಯಂತ ಎಸ್ಡಿಪಿಐ ಪ್ರತಿಭಟನೆಗೆ ಅನುಮತಿ ಕೇಳಿತ್ತು. ಇಲಾಖೆ ಎಲ್ಲಾ ಕಡೆ ಅನುಮತಿ ನೀಡಿದೆ. ಆದ್ರೆ ಇವತ್ತು ಮಂಗಳೂರು ಪೊಲೀಸರು ಅನುಮತಿ ರದ್ದುಗೊಳಿಸಿದ್ದಾರೆ.
ನಮ್ಮ ಪ್ರತಿಭಟನೆ ಜನ್ರ ಹಕ್ಕು ಅದನ್ನು ಪೊಲೀಸ್ ಇಲಾಖೆ ಹತ್ತಿಕ್ಕಿದೆ ಎಂದು ದೂರಿದರು. ನಮ್ಮ 16 ಸೇವಾ ಕೇಂದ್ರಗಳಿಗೆ ಬೀಗ ಹಾಕಿದ್ದಾರೆ.ಅಲ್ಲಿ ಸರ್ಕಾರಿ ಯೋಜನೆಗಳಿಗಾಗಿ ಸಾರ್ವಜನಿಕರು ಬರ್ತಾ ಇದ್ರು. ಈ ಸೇವಾ ಕಚೇರಿಗಳಿಗೆ ಬೀಗ ಹಾಕಿ ಏನು ಸಾಧನೆ ಮಾಡಲು ಹೊರಟ್ಟಿದ್ದಾರೆ. ಎಲ್ಲಾ ರಕ್ತ ನಿಧಿಗಳಲ್ಲಿ ಎಸ್ಡಿಪಿಐ ಕಾರ್ಯಕರ್ತರ ರಕ್ತ ಇದೆ. ಅದನ್ನು ಕೂಡ ಪೊಲೀಸ್ ಕಮಿಷನರ್ ವಶಕ್ಕೆ ಪಡೆದುಕೊಂಡು ಹೋಗಲಿ ಎಂದರು.
ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಸದಸ್ಯ ಆಸೀಫ್ ಕೋಟೆಬಾಗಿಲು ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…