Featured

ಎಲ್ಲಾ ರಕ್ತ ನಿಧಿಗಳಲ್ಲಿ ಎಸ್ಡಿಪಿಐ ಕಾರ್ಯಕರ್ತರ ರಕ್ತ ಇದೆ , ಅದನ್ನು ಕೂಡ ಪೊಲೀಸ್ ಕಮಿಷನರ್ ವಶಕ್ಕೆ ಪಡೆದುಕೊಂಡು ಹೋಗಲಿ : ಅನ್ವರ್ ಸಾದತ್ ಆಕ್ರೋಶ  – Vishwanews24

ಎಲ್ಲಾ ರಕ್ತನಿಧಿಗಳಲ್ಲಿ ನಮ್ಮ ಕಾರ್ಯಕರ್ತರ ರಕ್ತ ಇದೆ, ಅದನ್ನೂ ಕಮಿಷನರ್ ವಶಕ್ಕೆ ಪಡೆದುಕೊಂಡು ಹೋಗಲಿ

ಎಸ್‌ಡಿಪಿಐ ನಾಯಕರನ್ನು ಬಂಧಿಸಿ ಪಕ್ಷವನ್ನು ದಮನಿಸುವ ಕೆಲಸ ನಡೆಯುತ್ತಿದೆ

ಮುಂದಿನ ದಿನಗಳಲ್ಲಿ ಎಸ್‌ಡಿಪಿಐ ಎಲ್ಲೆಡೆ ಉಗ್ರ ಪ್ರತಿಭಟನೆ ನಡೆಸಲಿದೆ..

ಎಸ್.ಡಿ.ಪಿ.ಐ ದ.ಕ.ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಆಕ್ರೋಶ

ಮಂಗಳೂರು: ಎಸ್‌ಡಿಪಿಐ ನಾಯಕರನ್ನು ಬಂಧಿಸಿ ಪಕ್ಷವನ್ನು ದಮನಿಸುವ ಕೆಲಸ ನಡೆಯುತ್ತಿದೆ. 16 ಸೇವಾ ಕೇಂದ್ರಗಳಿಗೆ ಎನ್‌ಐಎ ಬೀಗ ಜಡಿದಿರುವುದು ಯಾಕೆ..? ಇಂದು ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ನಡೆಯುತ್ತದೆ. ಮುಂದಿನ ದಿನಗಳಲ್ಲಿ ಎಸ್‌ಡಿಪಿಐ ಎಲ್ಲೆಡೆ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಎಸ್.ಡಿ.ಪಿ.ಐ ದ.ಕ.ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್‌ಡಿಪಿಐ ಮುಖಂಡ ಶಾಫಿ ಬೆಳ್ಳಾರೆ, ಇಕ್ಬಾಲ್ ಬೆಳ್ಳಾರೆ ಎಲ್ಲೂ ತಲೆಮರೆಸಿಕೊಂಡಿರಲಿಲ್ಲ. ಸಾರ್ವಜನಿಕವಾಗಿ ಕಾರ್ಯಕ್ರಮದಲ್ಲಿ ‌ಭಾಗವಹಿಸ್ತಾ ಇದ್ರು. ಯಾಕಾಗಿ ಇವ್ರನ್ನು ಈ ರೀತಿ ಬಂಧಿಸಬೇಕಿತ್ತು. ಮುಖಂಡರನ್ನು ವಿಚಾರಣೆಗೆ ಕರೆದ್ರೆ ಅವ್ರೇ ಬರ್ತಾರೆ.

ಚಿಕ್ಕಮಗಳೂರು: ಅಪರೂಪದ ಜಾತ್ರೆ.. ಮಹಾಮಂಗಳಾರತಿ ವೇಳೆ ಅಲುಗಾಡುತ್ತೆ 16 ಅಡಿ ಎತ್ತರದ ಬೃಹತ್ ಹುತ್ತ – Vishwanews24

ಅದು ಬಿಟ್ಟು ಸಾರ್ವಜನಿಕ ವಾಹನದಲ್ಲಿ ಬರುವ ವೇಳೆ ಯಾಕೆ ಬಂಧಿಸಬೇಕಿತ್ತು. ರಾಜ್ಯದಾದ್ಯಂತ ಎಸ್ಡಿಪಿಐ ಪ್ರತಿಭಟನೆಗೆ ಅನುಮತಿ ಕೇಳಿತ್ತು. ಇಲಾಖೆ ಎಲ್ಲಾ ಕಡೆ ಅನುಮತಿ ನೀಡಿದೆ. ಆದ್ರೆ ಇವತ್ತು ಮಂಗಳೂರು ಪೊಲೀಸರು ಅನುಮತಿ ರದ್ದುಗೊಳಿಸಿದ್ದಾರೆ.

ನಮ್ಮ ಪ್ರತಿಭಟನೆ ಜನ್ರ ಹಕ್ಕು ಅದನ್ನು ಪೊಲೀಸ್ ಇಲಾಖೆ ಹತ್ತಿಕ್ಕಿದೆ ಎಂದು ದೂರಿದರು. ನಮ್ಮ 16 ಸೇವಾ ಕೇಂದ್ರಗಳಿಗೆ ಬೀಗ ಹಾಕಿದ್ದಾರೆ.ಅಲ್ಲಿ ಸರ್ಕಾರಿ ಯೋಜನೆಗಳಿಗಾಗಿ ಸಾರ್ವಜನಿಕರು ಬರ್ತಾ ಇದ್ರು. ಈ ಸೇವಾ ಕಚೇರಿಗಳಿಗೆ ಬೀಗ ಹಾಕಿ ಏನು ಸಾಧನೆ ಮಾಡಲು ಹೊರಟ್ಟಿದ್ದಾರೆ. ಎಲ್ಲಾ ರಕ್ತ ನಿಧಿಗಳಲ್ಲಿ ಎಸ್ಡಿಪಿಐ ಕಾರ್ಯಕರ್ತರ ರಕ್ತ ಇದೆ. ಅದನ್ನು ಕೂಡ ಪೊಲೀಸ್ ಕಮಿಷನರ್ ವಶಕ್ಕೆ ಪಡೆದುಕೊಂಡು ಹೋಗಲಿ ಎಂದರು.

ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಸದಸ್ಯ ಆಸೀಫ್ ಕೋಟೆಬಾಗಿಲು ಉಪಸ್ಥಿತರಿದ್ದರು.

ಕಾಪು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡಪಾನರರಿಗೆ ಹೊಸ ಮಾರಿಗುಡಿಯಿಂದ ಚಿತ್ರನಟಿ ಜಯಪ್ರಧಾ ಉಪಸ್ಥಿತಿಯಲ್ಲಿ ಸನ್ಮಾನ ಕಾರ್ಯಕ್ರಮ.

Vishwa News 24

Recent Posts

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

14 hours ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

14 hours ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

15 hours ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

16 hours ago

ನಾಳೆ SSLC ಫಲಿತಾಂಶ  ಪ್ರಕಟ – vishwanews24

ನಾಳೆ SSLC ಫಲಿತಾಂಶ  ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ  ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…

1 day ago

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ ; ಬಾಲಕಿ ಸಾವು -vishwanews24

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ…

2 days ago