ಮಂಗಳೂರು: ಎಸ್ಡಿಪಿಐ ನಾಯಕರನ್ನು ಬಂಧಿಸಿ ಪಕ್ಷವನ್ನು ದಮನಿಸುವ ಕೆಲಸ ನಡೆಯುತ್ತಿದೆ. 16 ಸೇವಾ ಕೇಂದ್ರಗಳಿಗೆ ಎನ್ಐಎ ಬೀಗ ಜಡಿದಿರುವುದು ಯಾಕೆ..? ಇಂದು ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ನಡೆಯುತ್ತದೆ. ಮುಂದಿನ ದಿನಗಳಲ್ಲಿ ಎಸ್ಡಿಪಿಐ ಎಲ್ಲೆಡೆ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಎಸ್.ಡಿ.ಪಿ.ಐ ದ.ಕ.ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್ಡಿಪಿಐ ಮುಖಂಡ ಶಾಫಿ ಬೆಳ್ಳಾರೆ, ಇಕ್ಬಾಲ್ ಬೆಳ್ಳಾರೆ ಎಲ್ಲೂ ತಲೆಮರೆಸಿಕೊಂಡಿರಲಿಲ್ಲ. ಸಾರ್ವಜನಿಕವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸ್ತಾ ಇದ್ರು. ಯಾಕಾಗಿ ಇವ್ರನ್ನು ಈ ರೀತಿ ಬಂಧಿಸಬೇಕಿತ್ತು. ಮುಖಂಡರನ್ನು ವಿಚಾರಣೆಗೆ ಕರೆದ್ರೆ ಅವ್ರೇ ಬರ್ತಾರೆ.
ಚಿಕ್ಕಮಗಳೂರು: ಅಪರೂಪದ ಜಾತ್ರೆ.. ಮಹಾಮಂಗಳಾರತಿ ವೇಳೆ ಅಲುಗಾಡುತ್ತೆ 16 ಅಡಿ ಎತ್ತರದ ಬೃಹತ್ ಹುತ್ತ – Vishwanews24
ಅದು ಬಿಟ್ಟು ಸಾರ್ವಜನಿಕ ವಾಹನದಲ್ಲಿ ಬರುವ ವೇಳೆ ಯಾಕೆ ಬಂಧಿಸಬೇಕಿತ್ತು. ರಾಜ್ಯದಾದ್ಯಂತ ಎಸ್ಡಿಪಿಐ ಪ್ರತಿಭಟನೆಗೆ ಅನುಮತಿ ಕೇಳಿತ್ತು. ಇಲಾಖೆ ಎಲ್ಲಾ ಕಡೆ ಅನುಮತಿ ನೀಡಿದೆ. ಆದ್ರೆ ಇವತ್ತು ಮಂಗಳೂರು ಪೊಲೀಸರು ಅನುಮತಿ ರದ್ದುಗೊಳಿಸಿದ್ದಾರೆ.
ನಮ್ಮ ಪ್ರತಿಭಟನೆ ಜನ್ರ ಹಕ್ಕು ಅದನ್ನು ಪೊಲೀಸ್ ಇಲಾಖೆ ಹತ್ತಿಕ್ಕಿದೆ ಎಂದು ದೂರಿದರು. ನಮ್ಮ 16 ಸೇವಾ ಕೇಂದ್ರಗಳಿಗೆ ಬೀಗ ಹಾಕಿದ್ದಾರೆ.ಅಲ್ಲಿ ಸರ್ಕಾರಿ ಯೋಜನೆಗಳಿಗಾಗಿ ಸಾರ್ವಜನಿಕರು ಬರ್ತಾ ಇದ್ರು. ಈ ಸೇವಾ ಕಚೇರಿಗಳಿಗೆ ಬೀಗ ಹಾಕಿ ಏನು ಸಾಧನೆ ಮಾಡಲು ಹೊರಟ್ಟಿದ್ದಾರೆ. ಎಲ್ಲಾ ರಕ್ತ ನಿಧಿಗಳಲ್ಲಿ ಎಸ್ಡಿಪಿಐ ಕಾರ್ಯಕರ್ತರ ರಕ್ತ ಇದೆ. ಅದನ್ನು ಕೂಡ ಪೊಲೀಸ್ ಕಮಿಷನರ್ ವಶಕ್ಕೆ ಪಡೆದುಕೊಂಡು ಹೋಗಲಿ ಎಂದರು.
ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಸದಸ್ಯ ಆಸೀಫ್ ಕೋಟೆಬಾಗಿಲು ಉಪಸ್ಥಿತರಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…