ಹೊಸದಿಲ್ಲಿ: ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಮತ್ತು ವಿಮಾನ ಪ್ರಯಾಣದ ವೇಳೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಕಟ್ಟುನಿಟ್ಟಿನ ಸೂಚನೆ ಹೊರಡಿಸಿದೆ.
ಕೊರೊನಾ ಪ್ರಕರಣ ಇಳಿಮುಖವಾಗುತ್ತಿದೆಯೆಂದು ಮತ್ತು ಸರ್ಕಾರ ನಿಯಮಾವಳಿಗಳನ್ನು ಸಡಿಲಗೊಳಿಸಿರುವ ಕಾರಣಕ್ಕಾಗಿ ಪ್ರಸ್ತುತ ಮಾಸ್ಕ್ ಧರಿಸದೆಯೇ ಓಡಾಡುವವರ ಸಂಖ್ಯೆ ಹೆಚ್ಚಾಗಿದೆ. ಆದರೆ, ದಿನದಿಂದ ದಿನಕ್ಕೆ ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚೆಚ್ಚು ಕಂಡು ಬರುತ್ತಿವೆ. ಈ ನಿಟ್ಟಿನಲ್ಲಿ ಸಂಭಾವ್ಯ ಅಪಾಯಗಳನ್ನು ತಪ್ಪಿಸುವ ಕಾರಣಕ್ಕಾಗಿ ಡಿಜಿಸಿಎಯು ವಿಮಾನಯಾನಿಗಳಿಗಾಗಿ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದೆ. ದೇಶದ ಎಲ್ಲ ವಿಮಾನ ನಿಲ್ದಾಣಗಳು ಹಾಗೂ ವಿಮಾನಗಳಲ್ಲಿ ಮಾಸ್ಕ್ ಧರಿಸುವುದು ಇನ್ನು ಮುಂದೆ ಕಡ್ಡಾಯ ಎಂದು ಬುಧವಾರ ಸೂಚನೆ ನೀಡಲಾಗಿದೆ.
ಮಾಸ್ಕ್ ಧರಿಸದ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸುವುದರೊಂದಿಗೆ ಮಾಸ್ಕ್ ಧರಿಸದೆ ಹಠದ ಧೋರಣೆ ತೋರಿಸದಲ್ಲಿ ಅದನ್ನು ಅಶಿಸ್ತು ಎಂದು ಪರಿಗಣಿಸಿ ಅವರ ವಿರುದ್ದ ಕ್ರಮ ಕೈಗೊಳ್ಳಬಹುದು ಎಂದು ಸೂಚನೆಯಲ್ಲಿ ತಿಳಿಸಿಲಾಗಿದೆ. ವಿಮಾನಯಾನಿಗಳು ಮತ್ತು ಸಿಬಂದಿಗೆ ಕಠಿಣ ನಿಯಮ ಜಾರಿಗೊಳಿಸಬೇಕೆಂಬ ದಿಲ್ಲಿ ಹೈಕೋರ್ಟ್ ಜೂ. 3ರಂದು ಹೊರಡಿಸಿದ ಆದೇಶದ ಬೆನ್ನಲ್ಲೇ ಡಿಜಿಸಿಎ ಈ ಸೂಚನೆಗಳನ್ನು ಜಾರಿಗೊಳಿಸಿದೆ. ಯಾನಿಗಳಿಗೆ ಈ ಬಗ್ಗೆ ಮಾಹಿತಿ ನೀಡುವುದಕ್ಕೆಂದು ಪ್ರಕಟಣೆ ನೀಡಲು ಎಲ್ಲಾ ಏರ್ಲೈನ್ಗಳಿಗೆ ಸೂಚನೆ ನೀಡಲಾಗಿದೆ. ನಿಯಮ ಉಲ್ಲಂಘನೆ ಮಾಡಿದವರಿಗೆ ಸ್ಥಳೀಯ ಪೊಲೀಸರು ಮತ್ತು ರಕ್ಷಣಾ ಪಡೆಗಳ ಸಹಕಾರದೊಂದಿಗೆ ದಂಡ ಮತ್ತು ಕ್ರಮ ಕೈಗೊಳ್ಳಬಹುದು ಎಂದು ನಿರ್ದೇಶನಾಲಯ ತಿಳಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…