ಹೊಸದಿಲ್ಲಿ: ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಮತ್ತು ವಿಮಾನ ಪ್ರಯಾಣದ ವೇಳೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಕಟ್ಟುನಿಟ್ಟಿನ ಸೂಚನೆ ಹೊರಡಿಸಿದೆ.
ಕೊರೊನಾ ಪ್ರಕರಣ ಇಳಿಮುಖವಾಗುತ್ತಿದೆಯೆಂದು ಮತ್ತು ಸರ್ಕಾರ ನಿಯಮಾವಳಿಗಳನ್ನು ಸಡಿಲಗೊಳಿಸಿರುವ ಕಾರಣಕ್ಕಾಗಿ ಪ್ರಸ್ತುತ ಮಾಸ್ಕ್ ಧರಿಸದೆಯೇ ಓಡಾಡುವವರ ಸಂಖ್ಯೆ ಹೆಚ್ಚಾಗಿದೆ. ಆದರೆ, ದಿನದಿಂದ ದಿನಕ್ಕೆ ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚೆಚ್ಚು ಕಂಡು ಬರುತ್ತಿವೆ. ಈ ನಿಟ್ಟಿನಲ್ಲಿ ಸಂಭಾವ್ಯ ಅಪಾಯಗಳನ್ನು ತಪ್ಪಿಸುವ ಕಾರಣಕ್ಕಾಗಿ ಡಿಜಿಸಿಎಯು ವಿಮಾನಯಾನಿಗಳಿಗಾಗಿ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದೆ. ದೇಶದ ಎಲ್ಲ ವಿಮಾನ ನಿಲ್ದಾಣಗಳು ಹಾಗೂ ವಿಮಾನಗಳಲ್ಲಿ ಮಾಸ್ಕ್ ಧರಿಸುವುದು ಇನ್ನು ಮುಂದೆ ಕಡ್ಡಾಯ ಎಂದು ಬುಧವಾರ ಸೂಚನೆ ನೀಡಲಾಗಿದೆ.
ಮಾಸ್ಕ್ ಧರಿಸದ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸುವುದರೊಂದಿಗೆ ಮಾಸ್ಕ್ ಧರಿಸದೆ ಹಠದ ಧೋರಣೆ ತೋರಿಸದಲ್ಲಿ ಅದನ್ನು ಅಶಿಸ್ತು ಎಂದು ಪರಿಗಣಿಸಿ ಅವರ ವಿರುದ್ದ ಕ್ರಮ ಕೈಗೊಳ್ಳಬಹುದು ಎಂದು ಸೂಚನೆಯಲ್ಲಿ ತಿಳಿಸಿಲಾಗಿದೆ. ವಿಮಾನಯಾನಿಗಳು ಮತ್ತು ಸಿಬಂದಿಗೆ ಕಠಿಣ ನಿಯಮ ಜಾರಿಗೊಳಿಸಬೇಕೆಂಬ ದಿಲ್ಲಿ ಹೈಕೋರ್ಟ್ ಜೂ. 3ರಂದು ಹೊರಡಿಸಿದ ಆದೇಶದ ಬೆನ್ನಲ್ಲೇ ಡಿಜಿಸಿಎ ಈ ಸೂಚನೆಗಳನ್ನು ಜಾರಿಗೊಳಿಸಿದೆ. ಯಾನಿಗಳಿಗೆ ಈ ಬಗ್ಗೆ ಮಾಹಿತಿ ನೀಡುವುದಕ್ಕೆಂದು ಪ್ರಕಟಣೆ ನೀಡಲು ಎಲ್ಲಾ ಏರ್ಲೈನ್ಗಳಿಗೆ ಸೂಚನೆ ನೀಡಲಾಗಿದೆ. ನಿಯಮ ಉಲ್ಲಂಘನೆ ಮಾಡಿದವರಿಗೆ ಸ್ಥಳೀಯ ಪೊಲೀಸರು ಮತ್ತು ರಕ್ಷಣಾ ಪಡೆಗಳ ಸಹಕಾರದೊಂದಿಗೆ ದಂಡ ಮತ್ತು ಕ್ರಮ ಕೈಗೊಳ್ಳಬಹುದು ಎಂದು ನಿರ್ದೇಶನಾಲಯ ತಿಳಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…