ಉಡುಪಿ, : ಉಡುಪಿಯ ಎಲ್ಲ ಅಧಿಕಾರಿಗಳು ಇನ್ನು ಪ್ರತಿ ಗುರುವಾರ ಸರಕಾರಿ ಬಸ್ ನಲ್ಲಿ ಓಡಾಟ ನಡೆಸಲಿದ್ದಾರೆ. ಈಗಾಗಲೇ ಪ್ರತಿ ಗುರುವಾರ ಬಸ್ ನಲ್ಲಿ ಓಡಾಟ ನಡೆಸುತ್ತಿರುವ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಅವರು ಇನ್ನು ಜಿಲ್ಲೆಯ ಎಲ್ಲಾ ಸರಕಾರಿ ಅಧಿಕಾರಿಗಳು ಪ್ರತಿ ಗುರುವಾರ ಬಸ್ ನಲ್ಲಿ ಓಡಾಟ ನಡೆಸಬೇಕೆಂದು ಆದೇಶಿಸಿದ್ದಾರೆ.
ಪ್ರತಿ ಗುರುವಾರ ಅಧಿಕಾರಿಗಳು ಸರಕಾರಿ ವಾಹನ ಉಪಯೋಗಿಸದೆ ಬಸ್ ನಲ್ಲಿ ಓಡಾಡುವ ಆದೇಶವನ್ನು ಹೊರಡಿಸಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ, ರಸ್ತೆಯಲ್ಲಿ ವಾಹನದಟ್ಟಣೆ ಕಡಿಮೆಯಾದರೆ ಪರಿಸರ ಮಾಲಿನ್ಯ ಕಡಿಮೆ ಆಗುತ್ತದೆ.
ಮಾಲಿನ್ಯ ಕಡಿಮೆ ಆದರೆ ನಮ್ಮದೇ ಆರೋಗ್ಯ ಚೆನ್ನಾಗಿರುತ್ತದೆ. ಸಮಸ್ಯೆಯೂ ನಮ್ಮಿಂದ ಆಗುತ್ತಿದೆ ಅದಕ್ಕೆ ನಾವೇ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ಹೊಂದಿರುವ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ, ತಾವೇ ಸರಕಾರಿ ವಾಹನ ಬಿಟ್ಟು ವಾರದಲ್ಲಿ ಒಂದು ದಿನ ಬಸ್ ನಲ್ಲಿ ಕಚೇರಿಗೆ ತೆರಳುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಈ ಆದೇಶವನ್ನು ಪಾಲಿಸುತ್ತಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…