ಉಡುಪಿ, : ಉಡುಪಿಯ ಎಲ್ಲ ಅಧಿಕಾರಿಗಳು ಇನ್ನು ಪ್ರತಿ ಗುರುವಾರ ಸರಕಾರಿ ಬಸ್ ನಲ್ಲಿ ಓಡಾಟ ನಡೆಸಲಿದ್ದಾರೆ. ಈಗಾಗಲೇ ಪ್ರತಿ ಗುರುವಾರ ಬಸ್ ನಲ್ಲಿ ಓಡಾಟ ನಡೆಸುತ್ತಿರುವ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಅವರು ಇನ್ನು ಜಿಲ್ಲೆಯ ಎಲ್ಲಾ ಸರಕಾರಿ ಅಧಿಕಾರಿಗಳು ಪ್ರತಿ ಗುರುವಾರ ಬಸ್ ನಲ್ಲಿ ಓಡಾಟ ನಡೆಸಬೇಕೆಂದು ಆದೇಶಿಸಿದ್ದಾರೆ.
ಪ್ರತಿ ಗುರುವಾರ ಅಧಿಕಾರಿಗಳು ಸರಕಾರಿ ವಾಹನ ಉಪಯೋಗಿಸದೆ ಬಸ್ ನಲ್ಲಿ ಓಡಾಡುವ ಆದೇಶವನ್ನು ಹೊರಡಿಸಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ, ರಸ್ತೆಯಲ್ಲಿ ವಾಹನದಟ್ಟಣೆ ಕಡಿಮೆಯಾದರೆ ಪರಿಸರ ಮಾಲಿನ್ಯ ಕಡಿಮೆ ಆಗುತ್ತದೆ.
ಮಾಲಿನ್ಯ ಕಡಿಮೆ ಆದರೆ ನಮ್ಮದೇ ಆರೋಗ್ಯ ಚೆನ್ನಾಗಿರುತ್ತದೆ. ಸಮಸ್ಯೆಯೂ ನಮ್ಮಿಂದ ಆಗುತ್ತಿದೆ ಅದಕ್ಕೆ ನಾವೇ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ಹೊಂದಿರುವ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ, ತಾವೇ ಸರಕಾರಿ ವಾಹನ ಬಿಟ್ಟು ವಾರದಲ್ಲಿ ಒಂದು ದಿನ ಬಸ್ ನಲ್ಲಿ ಕಚೇರಿಗೆ ತೆರಳುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಈ ಆದೇಶವನ್ನು ಪಾಲಿಸುತ್ತಿದ್ದಾರೆ.
ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.…
ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ : ಸಿಎಂ ಡಿಕೆಶಿ ಸ್ಪಷ್ಟನೆ ಬೆಂಗಳೂರು :ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ…
ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು ಹಿರಿಯಡ್ಕ: ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ…
ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ ಬೆಂಗಳೂರು: ಹಿರಿಯ ಲೇಖಕಿ ಹಾಗೂ ಖ್ಯಾತ ಪತ್ರಕರ್ತ ದಿವಂಗತ ಪಿ. ಲಂಕೇಶ್ ಅವರ…
ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ ತಿರುವನಂತಪುರಂ: ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ…
ಮಣಿಪಾಲ: ಚಲಿಸುತ್ತಿದ್ದ ಶಾಲಾ ಬಸ್ಸಿನ ಚಾಲಕನಿಗೆ ಹಠಾತ್ ಹೃದಯಾಘಾತ ; ತಪ್ಪಿದ ಭಾರಿ ಅನಾಹುತ ಮಣಿಪಾಲ: ಚಲಿಸುತ್ತಿದ್ದ ಶಾಲಾ ಬಸ್ಸಿನ…