ಉಡುಪಿ, : ಉಡುಪಿಯ ಎಲ್ಲ ಅಧಿಕಾರಿಗಳು ಇನ್ನು ಪ್ರತಿ ಗುರುವಾರ ಸರಕಾರಿ ಬಸ್ ನಲ್ಲಿ ಓಡಾಟ ನಡೆಸಲಿದ್ದಾರೆ. ಈಗಾಗಲೇ ಪ್ರತಿ ಗುರುವಾರ ಬಸ್ ನಲ್ಲಿ ಓಡಾಟ ನಡೆಸುತ್ತಿರುವ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಅವರು ಇನ್ನು ಜಿಲ್ಲೆಯ ಎಲ್ಲಾ ಸರಕಾರಿ ಅಧಿಕಾರಿಗಳು ಪ್ರತಿ ಗುರುವಾರ ಬಸ್ ನಲ್ಲಿ ಓಡಾಟ ನಡೆಸಬೇಕೆಂದು ಆದೇಶಿಸಿದ್ದಾರೆ.
ಪ್ರತಿ ಗುರುವಾರ ಅಧಿಕಾರಿಗಳು ಸರಕಾರಿ ವಾಹನ ಉಪಯೋಗಿಸದೆ ಬಸ್ ನಲ್ಲಿ ಓಡಾಡುವ ಆದೇಶವನ್ನು ಹೊರಡಿಸಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ, ರಸ್ತೆಯಲ್ಲಿ ವಾಹನದಟ್ಟಣೆ ಕಡಿಮೆಯಾದರೆ ಪರಿಸರ ಮಾಲಿನ್ಯ ಕಡಿಮೆ ಆಗುತ್ತದೆ.
ಮಾಲಿನ್ಯ ಕಡಿಮೆ ಆದರೆ ನಮ್ಮದೇ ಆರೋಗ್ಯ ಚೆನ್ನಾಗಿರುತ್ತದೆ. ಸಮಸ್ಯೆಯೂ ನಮ್ಮಿಂದ ಆಗುತ್ತಿದೆ ಅದಕ್ಕೆ ನಾವೇ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ಹೊಂದಿರುವ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ, ತಾವೇ ಸರಕಾರಿ ವಾಹನ ಬಿಟ್ಟು ವಾರದಲ್ಲಿ ಒಂದು ದಿನ ಬಸ್ ನಲ್ಲಿ ಕಚೇರಿಗೆ ತೆರಳುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಈ ಆದೇಶವನ್ನು ಪಾಲಿಸುತ್ತಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…