ಉಡುಪಿ, : ಉಡುಪಿಯ ಎಲ್ಲ ಅಧಿಕಾರಿಗಳು ಇನ್ನು ಪ್ರತಿ ಗುರುವಾರ ಸರಕಾರಿ ಬಸ್ ನಲ್ಲಿ ಓಡಾಟ ನಡೆಸಲಿದ್ದಾರೆ. ಈಗಾಗಲೇ ಪ್ರತಿ ಗುರುವಾರ ಬಸ್ ನಲ್ಲಿ ಓಡಾಟ ನಡೆಸುತ್ತಿರುವ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಅವರು ಇನ್ನು ಜಿಲ್ಲೆಯ ಎಲ್ಲಾ ಸರಕಾರಿ ಅಧಿಕಾರಿಗಳು ಪ್ರತಿ ಗುರುವಾರ ಬಸ್ ನಲ್ಲಿ ಓಡಾಟ ನಡೆಸಬೇಕೆಂದು ಆದೇಶಿಸಿದ್ದಾರೆ.
ಪ್ರತಿ ಗುರುವಾರ ಅಧಿಕಾರಿಗಳು ಸರಕಾರಿ ವಾಹನ ಉಪಯೋಗಿಸದೆ ಬಸ್ ನಲ್ಲಿ ಓಡಾಡುವ ಆದೇಶವನ್ನು ಹೊರಡಿಸಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ, ರಸ್ತೆಯಲ್ಲಿ ವಾಹನದಟ್ಟಣೆ ಕಡಿಮೆಯಾದರೆ ಪರಿಸರ ಮಾಲಿನ್ಯ ಕಡಿಮೆ ಆಗುತ್ತದೆ.
ಮಾಲಿನ್ಯ ಕಡಿಮೆ ಆದರೆ ನಮ್ಮದೇ ಆರೋಗ್ಯ ಚೆನ್ನಾಗಿರುತ್ತದೆ. ಸಮಸ್ಯೆಯೂ ನಮ್ಮಿಂದ ಆಗುತ್ತಿದೆ ಅದಕ್ಕೆ ನಾವೇ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ಹೊಂದಿರುವ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ, ತಾವೇ ಸರಕಾರಿ ವಾಹನ ಬಿಟ್ಟು ವಾರದಲ್ಲಿ ಒಂದು ದಿನ ಬಸ್ ನಲ್ಲಿ ಕಚೇರಿಗೆ ತೆರಳುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಈ ಆದೇಶವನ್ನು ಪಾಲಿಸುತ್ತಿದ್ದಾರೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…