Featured

ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ 1 ಕೋಟಿ 15 ಲಕ್ಷ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ – vishwanews24

ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ 1 ಕೋಟಿ 15 ಲಕ್ಷ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ಮತ್ತು ಉದ್ಘಾಟನಾ ಕಾರ್ಯಕ್ರಮ ಇಂದು ಭವ್ಯವಾಗಿ ನೆರವೇರಿತು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಒಟ್ಟು ರೂ. 1 ಕೋಟಿ 15 ಲಕ್ಷ ಮೊತ್ತದ ಅನುದಾನವನ್ನು ವಿವಿಧ ಯೋಜನೆಗಳಿಗೆ ಮಂಜೂರು ಮಾಡಲಾಗಿದ್ದು, ಇದರ ಗುದ್ದಲಿ ಪೂಜೆ ಹಾಗೂ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು (08 ಅಕ್ಟೋಬರ್ 2025) ನೆರವೇರಿಸಿದರು.

ಕಾರ್ಯಕ್ರಮದ ಅಂಗವಾಗಿ ಎಲ್ಲೂರು ಅದಮಾರು ಪ್ರದೇಶದಲ್ಲಿ ನಿರ್ಮಾಣಗೊಳ್ಳಲಿರುವ ಮಲ್ಟಿಪರ್ಪಸ್ ಸೆಂಟರ್ ಕಾಮಗಾರಿಗೆ 60 ಲಕ್ಷ ರೂ., ಮಡಿವಾಳ ತೋಟ ಹರೀಶ್ ಶೆಟ್ಟಿ ಮನೆ ಬಳಿ ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂ., ಮಾಣಿಯೂರು ಕೋರ್ದಬ್ಬು ದೈವಸ್ಥಾನ ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂ., ಹಾಗೂ ಎಲ್ಲೂರು ಗುತ್ತು ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂ. ಸೇರಿದಂತೆ ಒಟ್ಟು 90 ಲಕ್ಷ ರೂಪಾಯಿ ಮೊತ್ತದ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಇದೇ ವೇಳೆ ಉಳ್ಳೂರು ವಿಮಲ ಪೂಜಾರ್ತಿ ಮನೆ ಬಳಿ ರಸ್ತೆ ಅಭಿವೃದ್ಧಿಗೆ 5 ಲಕ್ಷ, ತೆಂಕರಗುತ್ತು ರಸ್ತೆ ಅಭಿವೃದ್ಧಿಗೆ 5 ಲಕ್ಷ, ಮಾಣಿಯೂರು ಮಠ ರಸ್ತೆ ಅಭಿವೃದ್ಧಿಗೆ 5 ಲಕ್ಷ, ಕುಂಜೂರು ಶಾಂಭವಿ ಶೆಟ್ಟಿ ಮನೆ ಬಳಿ ರಸ್ತೆ ಅಭಿವೃದ್ಧಿಗೆ 5 ಲಕ್ಷ ಹಾಗೂ ಪಾಂಡುರಂಗ ಭಜನಾ ಮಂದಿರದಲ್ಲಿ ಶೌಚಾಲಯ ಮತ್ತು ಸ್ನಾನದ ಕೋಣೆ ನಿರ್ಮಾಣಕ್ಕೆ 5 ಲಕ್ಷ ರೂಪಾಯಿ ಸೇರಿದಂತೆ ಒಟ್ಟು 25 ಲಕ್ಷ ರೂಪಾಯಿ ಮೊತ್ತದ ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಎಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿರಾಜ್ ರಾವ್, ಉಪಾಧ್ಯಕ್ಷೆ ಉಷಾ, ಸದಸ್ಯರು ಜಯರಾಮ ದೇವಾಡಿಗ, ಶಾಂತಿ ಆಚಾರ್ಯ, ವಸಂತಿ ಮಧ್ವರಾಜ್, ಹರೀಶ್ ಬೆಳ್ಳಿಬೆಟ್ಟು, ದಯಾನಂದ ಶೆಟ್ಟಿಗಾರ್, ಎಲ್ಲೂರು ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕ ಸತೀಶ್ ಶೆಟ್ಟಿ ಗುಡ್ಡೆಚ್ಚಿ, ಹಾಗೂ ಸ್ಥಳೀಯ ಗಣ್ಯರಾದ ಹರೀಶ್ ಶೆಟ್ಟಿ, ಗಣೇಶ್ ಕುಲಾಲ್ ಎಲ್ಲೂರು, ಉದಯ ಅದಮಾರು, ಸದಾನಂದ ಪೂಜಾರಿ, ಸುಕೇಶ್ ಶೆಟ್ಟಿ ಉಳ್ಳೂರು, ರಾಜೇಂದ್ರ ಸಾಲಿಯಾನ್, ರಾಘವೇಂದ್ರ ರಾವ್ ಸೇರಿದಂತೆ ಅನೇಕ ಮಂದಿ ಭಾಗವಹಿಸಿದ್ದರು.

ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಬದ್ಧತೆ ಹಾಗೂ ಕಾರ್ಯತತ್ಪರತೆ ಮತ್ತೊಮ್ಮೆ ಸ್ಪಷ್ಟವಾಗಿದ್ದು, ಈ ಯೋಜನೆಗಳಿಂದ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಅಭಿವೃದ್ಧಿಯ ನೂತನ ಅಧ್ಯಾಯ ಆರಂಭಗೊಳ್ಳಲಿದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

19 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

19 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

20 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

21 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

21 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

22 hours ago