ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ಮತ್ತು ಉದ್ಘಾಟನಾ ಕಾರ್ಯಕ್ರಮ ಇಂದು ಭವ್ಯವಾಗಿ ನೆರವೇರಿತು.
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಒಟ್ಟು ರೂ. 1 ಕೋಟಿ 15 ಲಕ್ಷ ಮೊತ್ತದ ಅನುದಾನವನ್ನು ವಿವಿಧ ಯೋಜನೆಗಳಿಗೆ ಮಂಜೂರು ಮಾಡಲಾಗಿದ್ದು, ಇದರ ಗುದ್ದಲಿ ಪೂಜೆ ಹಾಗೂ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು (08 ಅಕ್ಟೋಬರ್ 2025) ನೆರವೇರಿಸಿದರು.
ಕಾರ್ಯಕ್ರಮದ ಅಂಗವಾಗಿ ಎಲ್ಲೂರು ಅದಮಾರು ಪ್ರದೇಶದಲ್ಲಿ ನಿರ್ಮಾಣಗೊಳ್ಳಲಿರುವ ಮಲ್ಟಿಪರ್ಪಸ್ ಸೆಂಟರ್ ಕಾಮಗಾರಿಗೆ 60 ಲಕ್ಷ ರೂ., ಮಡಿವಾಳ ತೋಟ ಹರೀಶ್ ಶೆಟ್ಟಿ ಮನೆ ಬಳಿ ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂ., ಮಾಣಿಯೂರು ಕೋರ್ದಬ್ಬು ದೈವಸ್ಥಾನ ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂ., ಹಾಗೂ ಎಲ್ಲೂರು ಗುತ್ತು ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂ. ಸೇರಿದಂತೆ ಒಟ್ಟು 90 ಲಕ್ಷ ರೂಪಾಯಿ ಮೊತ್ತದ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಇದೇ ವೇಳೆ ಉಳ್ಳೂರು ವಿಮಲ ಪೂಜಾರ್ತಿ ಮನೆ ಬಳಿ ರಸ್ತೆ ಅಭಿವೃದ್ಧಿಗೆ 5 ಲಕ್ಷ, ತೆಂಕರಗುತ್ತು ರಸ್ತೆ ಅಭಿವೃದ್ಧಿಗೆ 5 ಲಕ್ಷ, ಮಾಣಿಯೂರು ಮಠ ರಸ್ತೆ ಅಭಿವೃದ್ಧಿಗೆ 5 ಲಕ್ಷ, ಕುಂಜೂರು ಶಾಂಭವಿ ಶೆಟ್ಟಿ ಮನೆ ಬಳಿ ರಸ್ತೆ ಅಭಿವೃದ್ಧಿಗೆ 5 ಲಕ್ಷ ಹಾಗೂ ಪಾಂಡುರಂಗ ಭಜನಾ ಮಂದಿರದಲ್ಲಿ ಶೌಚಾಲಯ ಮತ್ತು ಸ್ನಾನದ ಕೋಣೆ ನಿರ್ಮಾಣಕ್ಕೆ 5 ಲಕ್ಷ ರೂಪಾಯಿ ಸೇರಿದಂತೆ ಒಟ್ಟು 25 ಲಕ್ಷ ರೂಪಾಯಿ ಮೊತ್ತದ ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಎಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿರಾಜ್ ರಾವ್, ಉಪಾಧ್ಯಕ್ಷೆ ಉಷಾ, ಸದಸ್ಯರು ಜಯರಾಮ ದೇವಾಡಿಗ, ಶಾಂತಿ ಆಚಾರ್ಯ, ವಸಂತಿ ಮಧ್ವರಾಜ್, ಹರೀಶ್ ಬೆಳ್ಳಿಬೆಟ್ಟು, ದಯಾನಂದ ಶೆಟ್ಟಿಗಾರ್, ಎಲ್ಲೂರು ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕ ಸತೀಶ್ ಶೆಟ್ಟಿ ಗುಡ್ಡೆಚ್ಚಿ, ಹಾಗೂ ಸ್ಥಳೀಯ ಗಣ್ಯರಾದ ಹರೀಶ್ ಶೆಟ್ಟಿ, ಗಣೇಶ್ ಕುಲಾಲ್ ಎಲ್ಲೂರು, ಉದಯ ಅದಮಾರು, ಸದಾನಂದ ಪೂಜಾರಿ, ಸುಕೇಶ್ ಶೆಟ್ಟಿ ಉಳ್ಳೂರು, ರಾಜೇಂದ್ರ ಸಾಲಿಯಾನ್, ರಾಘವೇಂದ್ರ ರಾವ್ ಸೇರಿದಂತೆ ಅನೇಕ ಮಂದಿ ಭಾಗವಹಿಸಿದ್ದರು.
ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಬದ್ಧತೆ ಹಾಗೂ ಕಾರ್ಯತತ್ಪರತೆ ಮತ್ತೊಮ್ಮೆ ಸ್ಪಷ್ಟವಾಗಿದ್ದು, ಈ ಯೋಜನೆಗಳಿಂದ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಅಭಿವೃದ್ಧಿಯ ನೂತನ ಅಧ್ಯಾಯ ಆರಂಭಗೊಳ್ಳಲಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…