ಕಾಪು: ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಆಡಳಿತಕ್ಕೊಳಪಟ್ಟ ವೀರಾಂಜನೇಯ ಸನ್ನಿಧಿಗೆ ಗುರುವಾರ ರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನ ಬೆಳ್ಳಿ ಪರಿಕರಗಳನ್ನು ಕದ್ದೊಯ್ದ ಘಟನೆ ಸಂಭವಿಸಿದೆ.
ಗುರುವಾರ ರಾತ್ರಿ ಸುರಿದ ಬಾರೀ ಮಳೆಯ ಲಾಭಪಡೆದ ಕಳ್ಳರು ಆಂಜನೇಯ ಗುಡಿಯ ಬಾಗಿಲ ಬೀಗ ಮುರಿದು ಒಳನುಗ್ಗಿದ ಕಳ್ಳರು ಆಂಜನೇಯ ವಿಗ್ರಹಕ್ಕೆ ಹೊದಿಸಲಾದ ಬೆಳ್ಳಿಯ ಕವಚ, ಪ್ರಭಾವಳಿ ಹಾಗು ಚಿನ್ನದ ಸರ, ಬೆಳ್ಳಿ ಕಾಲು ದೀಪಗಳನ್ನು ದೋಚಿಕೊಂಡು ಹೋಗಿದ್ದಾರೆ.ಶುಕ್ರವಾರ ಬೆಳಿಗ್ಗೆ ವಿರಾಂಜನೇಯ ಸನ್ನಿಧಿಗೆ ಅರ್ಚಕ ಸತ್ಯನಾರಾಯಣ ಆಚಾರ್ಯರವರು ಪೂಜೆಗಾಗಿ ತೆರಳಿದಾಗ ಕಳ್ಳತನ ನಡೆದಿರುವ ವಿಚಾರ ಬೆಳಕಿಗೆ ಬಂದಿದೆ.
ಸ್ಥಳೀಯರಿಂದ ದೇವಸ್ಥಾನದ ಕೆರೆಯಲ್ಲಿ ಸೊತ್ತುಗಳ ಹುಡುಕಾಟ:
ಎಲ್ಲೂರು ಶ್ರೀ ವಿಶ್ವನಾಥ ಕ್ಷೇತ್ರವು ಇತಿಹಾಸ ಪ್ರಸಿದ್ದವಾಗಿದ್ದು ,ಈ ಬಾಗದಲ್ಲಿ ಯಾರೇ ಕಳ್ಳತನ ಮಾಡಿದರು ಸಿಕ್ಕಿ ಬೀಳುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬ ನಂಬಿಕೆ ಸ್ಥಳೀಯರದ್ದು, ಕಳ್ಳರು ಕಳ್ಳತನ ಮಾಡಿದ ಸುತ್ತುಗಳನ್ನು ಕೊಂಡೊಯ್ಯಲು ಸಾಧ್ಯವಾಗದೆ ಪಕ್ಕದಲ್ಲೇ ಇರುವ ದೇವಲದ ಕೆರಯಲ್ಲಿ ಎಸೆದು ಹೋಗಿರಲೂಬಹುದೆಂಬ ಸಂಶಯ ಕೂಡ ಸ್ಥಳೀಯರದ್ದಾಗಿದ್ದು, ಈ ನಿಟ್ಟಿನಲ್ಲಿ ಸ್ಥಳೀಯ ಯುವಕರು ಕೆರೆಗೆ ಹಾರಿ ಸೊತ್ತುಗಳ ಹುಡುಕಾಟ ನಡೆಸಿದ್ದಾರೆ. ಆದರೆ ಯಾವುದೇ ಸೊತ್ತುಗಳು ಕೆರೆಯಲ್ಲಿ ಪತ್ತೆಯಾಗಿಲ್ಲ.ಸ್ಥಳಕ್ಕೆ ಕಾಪು ವೃತ್ತ ನಿರೀಕ್ಷಕ ಹಾಲಮೂರ್ತಿರಾವ್ , ಪಡುಬಿದ್ರಿ ಪೊಲೀಸರು ,ಉಡುಪಿ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…