ಕಾಪು: ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಆಡಳಿತಕ್ಕೊಳಪಟ್ಟ ವೀರಾಂಜನೇಯ ಸನ್ನಿಧಿಗೆ ಗುರುವಾರ ರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನ ಬೆಳ್ಳಿ ಪರಿಕರಗಳನ್ನು ಕದ್ದೊಯ್ದ ಘಟನೆ ಸಂಭವಿಸಿದೆ.
ಗುರುವಾರ ರಾತ್ರಿ ಸುರಿದ ಬಾರೀ ಮಳೆಯ ಲಾಭಪಡೆದ ಕಳ್ಳರು ಆಂಜನೇಯ ಗುಡಿಯ ಬಾಗಿಲ ಬೀಗ ಮುರಿದು ಒಳನುಗ್ಗಿದ ಕಳ್ಳರು ಆಂಜನೇಯ ವಿಗ್ರಹಕ್ಕೆ ಹೊದಿಸಲಾದ ಬೆಳ್ಳಿಯ ಕವಚ, ಪ್ರಭಾವಳಿ ಹಾಗು ಚಿನ್ನದ ಸರ, ಬೆಳ್ಳಿ ಕಾಲು ದೀಪಗಳನ್ನು ದೋಚಿಕೊಂಡು ಹೋಗಿದ್ದಾರೆ.ಶುಕ್ರವಾರ ಬೆಳಿಗ್ಗೆ ವಿರಾಂಜನೇಯ ಸನ್ನಿಧಿಗೆ ಅರ್ಚಕ ಸತ್ಯನಾರಾಯಣ ಆಚಾರ್ಯರವರು ಪೂಜೆಗಾಗಿ ತೆರಳಿದಾಗ ಕಳ್ಳತನ ನಡೆದಿರುವ ವಿಚಾರ ಬೆಳಕಿಗೆ ಬಂದಿದೆ.
ಸ್ಥಳೀಯರಿಂದ ದೇವಸ್ಥಾನದ ಕೆರೆಯಲ್ಲಿ ಸೊತ್ತುಗಳ ಹುಡುಕಾಟ:
ಎಲ್ಲೂರು ಶ್ರೀ ವಿಶ್ವನಾಥ ಕ್ಷೇತ್ರವು ಇತಿಹಾಸ ಪ್ರಸಿದ್ದವಾಗಿದ್ದು ,ಈ ಬಾಗದಲ್ಲಿ ಯಾರೇ ಕಳ್ಳತನ ಮಾಡಿದರು ಸಿಕ್ಕಿ ಬೀಳುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬ ನಂಬಿಕೆ ಸ್ಥಳೀಯರದ್ದು, ಕಳ್ಳರು ಕಳ್ಳತನ ಮಾಡಿದ ಸುತ್ತುಗಳನ್ನು ಕೊಂಡೊಯ್ಯಲು ಸಾಧ್ಯವಾಗದೆ ಪಕ್ಕದಲ್ಲೇ ಇರುವ ದೇವಲದ ಕೆರಯಲ್ಲಿ ಎಸೆದು ಹೋಗಿರಲೂಬಹುದೆಂಬ ಸಂಶಯ ಕೂಡ ಸ್ಥಳೀಯರದ್ದಾಗಿದ್ದು, ಈ ನಿಟ್ಟಿನಲ್ಲಿ ಸ್ಥಳೀಯ ಯುವಕರು ಕೆರೆಗೆ ಹಾರಿ ಸೊತ್ತುಗಳ ಹುಡುಕಾಟ ನಡೆಸಿದ್ದಾರೆ. ಆದರೆ ಯಾವುದೇ ಸೊತ್ತುಗಳು ಕೆರೆಯಲ್ಲಿ ಪತ್ತೆಯಾಗಿಲ್ಲ.ಸ್ಥಳಕ್ಕೆ ಕಾಪು ವೃತ್ತ ನಿರೀಕ್ಷಕ ಹಾಲಮೂರ್ತಿರಾವ್ , ಪಡುಬಿದ್ರಿ ಪೊಲೀಸರು ,ಉಡುಪಿ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…