Featured

ಎಲ್ಲೂರು : ಪಾಳುಬಿದ್ದ ಬಾವಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆ – ಪತಿಯೇ ಕೊಲೆ ಮಾಡಿರುವ ಶಂಕೆ -Vishwanews24

ಪಡುಬಿದ್ರಿ : ಪಾಳುಬಿದ್ದ ಬಾವಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆ – ಪತಿಯೇ ಕೊಲೆ ಮಾಡಿರುವ ಶಂಕೆ

ಪಡುಬಿದ್ರಿ ಸಮೀಪದ ಎಲ್ಲೂರು ಗ್ರಾಮದ ಹಾಡಿಯಲ್ಲಿರುವ ಪಾಳುಬಿದ್ದ ಬಾವಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾಗಿದ್ದು ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಎಲ್ಲೂರು ಗ್ರಾಮದ ರಕ್ಷಿತಾ(24) ಮೃತಪಟ್ಟ ಮಹಿಳೆ.

ಕಾಪುವಿನ ಫ್ಯಾನ್ಸಿ ಸ್ಟೋರ್‌‌ನಲ್ಲಿ ಕೆಲಸ ಮಾಡುತ್ತಿದ್ದ ರಕ್ಷಿತಾ ಅವರು ತಮ್ಮ ಸಹೋದ್ಯೋಗಿ ಸಂಜಯ ಆಚಾರಿ ಎಂಬಾತನೊಂದಿಗೆ 2 ವರ್ಷದ ಹಿಂದೆ ಮದುವೆ ಆಗಿದ್ದರು.

ನಂತರ ರಕ್ಷಿತಾಳ ತಾಯಿಗೆ ಹುಷಾರಿಲ್ಲದ ಕಾರಣ ಕಾಪುವಿನ ಎಲ್ಲೂರು ಕಂಚುಗಾರ ಕೇರಿ ಎಂಬಲ್ಲಿರುವ ತಾಯಿ ಮನೆಗೆ ಬಂದು ಗಂಡ ಹಾಗೂ ತಂದೆ ತಾಯಿಯೊಂದಿಗೆ ವಾಸವಾಗಿದ್ದರು.

ಈ ನಡುವೆ ಅ.3 ರಂದು ರಕ್ಷಿತಾ ಅವರ ಅವಳ ಗಂಡ ಸಂಜಯ್ ಹಾಗೂ ಅವರ ಜೊತೆ ಕೆಲಸ ಮಾಡುವ 3 ಜನ ಹುಡುಗಿಯರೊಂದಿಗೆ ರಕ್ಷಿತಾ ಅವರ ದೊಡ್ಡಮ್ಮನ ಮಗಳು ಶಕುಂತಳ ಎಂಬವರ ರವರ ಮನೆಗೆ ಬಂದು ರಕ್ಷಿತಾಳ ನಡತೆ ಸರಿ ಇಲ್ಲ ಎಂಬುದಾಗಿ ತಿಳಿಸಿ, ರಕ್ಷಿತಾ ಅವರನ್ನು ಅಲ್ಲಿಯೇ ಬಿಟ್ಟು ನಂತರ ಅದೇ ದಿನ ಸಂಜೆ ಬಂದು ಕರೆದುಕೊಂಡು ಹೋಗಿದ್ದ.

ಆ ನಂತರ ರಕ್ಷಿತಾ ಅವರ ಆರೋಗ್ಯ ವಿಚಾರಿಸಲು ಶಕುಂತಳ ಅವರು ಸಂಜಯ್ ಗೆ ಕರೆ ಮಾಡಿದಾಗ ಸರಿಯಾಗಿ ಸ್ಪಂದಿಸದೇ ಪತ್ನಿ ಯಾರೊಂದಿಗೋ ಹೋಗಿರಬೇಕು ಎಂದು ಉತ್ತರಿಸಿದ್ದಾನೆ.

ಅಲ್ಲದೆ ಈ ವೇಳೆ ರಕ್ಷಿತಾ ಅವರನ್ನು ಮನೆಯಲ್ಲಿ ಹುಡುಕಿದರೂ ಪತ್ತೆಯಾಗಿರುವುದಿಲ್ಲ. ಆದರೆ ಅ.8 ರ ಸಂಜೆ ವೇಳೆ ಎಲ್ಲೂರು ಗ್ರಾಮದ ದಿ. ಪೊಲ್ಲಶೆಟ್ಟಿ ಎಂಬುವರ ಹಾಡಿಯಲ್ಲಿರುವ ಪಾಳುಬಿದ್ದ ಕೆಸರು ನೀರು ತುಂಬಿರುವ ದೊಡ್ಡ ಬಾವಿಯಲ್ಲಿ ರಕ್ಷಿತಾ ಅವರ ಮೃತದೇಹ ನೀರಿನಲ್ಲಿ ಕವುಚಿ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಅದರಂತೆ ರಕ್ಷಿತಾ ಅವರು ಪಾಳು ಬಾವಿಗೆ ಬಿದ್ದಿರುವ ಅಥವಾ ಅವರನ್ನು ಇನ್ಯಾರೋ ದೂಡಿಹಾಕಿರುವ ಕಾರಣದಿಂದ ಆಕೆಯು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಸಾಧ್ಯತೆ ಇದ್ದು, ರಕ್ಷಿತಾರ ಮರಣದ ಬಗ್ಗೆ ಅವಳ ಗಂಡ ಸಂಜಯ ಆಚಾರಿಯ ಮೇಲೆ ಸಂಶಯವಿರುವುದಾಗಿ ಶಕುಂತಳಾ ಅವರು ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago