Featured

ಎಲ್ಲೂರು : ಪಾಳುಬಿದ್ದ ಬಾವಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆ – ಪತಿಯೇ ಕೊಲೆ ಮಾಡಿರುವ ಶಂಕೆ -Vishwanews24

ಪಡುಬಿದ್ರಿ : ಪಾಳುಬಿದ್ದ ಬಾವಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆ – ಪತಿಯೇ ಕೊಲೆ ಮಾಡಿರುವ ಶಂಕೆ

ಪಡುಬಿದ್ರಿ ಸಮೀಪದ ಎಲ್ಲೂರು ಗ್ರಾಮದ ಹಾಡಿಯಲ್ಲಿರುವ ಪಾಳುಬಿದ್ದ ಬಾವಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾಗಿದ್ದು ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಎಲ್ಲೂರು ಗ್ರಾಮದ ರಕ್ಷಿತಾ(24) ಮೃತಪಟ್ಟ ಮಹಿಳೆ.

ಕಾಪುವಿನ ಫ್ಯಾನ್ಸಿ ಸ್ಟೋರ್‌‌ನಲ್ಲಿ ಕೆಲಸ ಮಾಡುತ್ತಿದ್ದ ರಕ್ಷಿತಾ ಅವರು ತಮ್ಮ ಸಹೋದ್ಯೋಗಿ ಸಂಜಯ ಆಚಾರಿ ಎಂಬಾತನೊಂದಿಗೆ 2 ವರ್ಷದ ಹಿಂದೆ ಮದುವೆ ಆಗಿದ್ದರು.

ನಂತರ ರಕ್ಷಿತಾಳ ತಾಯಿಗೆ ಹುಷಾರಿಲ್ಲದ ಕಾರಣ ಕಾಪುವಿನ ಎಲ್ಲೂರು ಕಂಚುಗಾರ ಕೇರಿ ಎಂಬಲ್ಲಿರುವ ತಾಯಿ ಮನೆಗೆ ಬಂದು ಗಂಡ ಹಾಗೂ ತಂದೆ ತಾಯಿಯೊಂದಿಗೆ ವಾಸವಾಗಿದ್ದರು.

ಈ ನಡುವೆ ಅ.3 ರಂದು ರಕ್ಷಿತಾ ಅವರ ಅವಳ ಗಂಡ ಸಂಜಯ್ ಹಾಗೂ ಅವರ ಜೊತೆ ಕೆಲಸ ಮಾಡುವ 3 ಜನ ಹುಡುಗಿಯರೊಂದಿಗೆ ರಕ್ಷಿತಾ ಅವರ ದೊಡ್ಡಮ್ಮನ ಮಗಳು ಶಕುಂತಳ ಎಂಬವರ ರವರ ಮನೆಗೆ ಬಂದು ರಕ್ಷಿತಾಳ ನಡತೆ ಸರಿ ಇಲ್ಲ ಎಂಬುದಾಗಿ ತಿಳಿಸಿ, ರಕ್ಷಿತಾ ಅವರನ್ನು ಅಲ್ಲಿಯೇ ಬಿಟ್ಟು ನಂತರ ಅದೇ ದಿನ ಸಂಜೆ ಬಂದು ಕರೆದುಕೊಂಡು ಹೋಗಿದ್ದ.

ಆ ನಂತರ ರಕ್ಷಿತಾ ಅವರ ಆರೋಗ್ಯ ವಿಚಾರಿಸಲು ಶಕುಂತಳ ಅವರು ಸಂಜಯ್ ಗೆ ಕರೆ ಮಾಡಿದಾಗ ಸರಿಯಾಗಿ ಸ್ಪಂದಿಸದೇ ಪತ್ನಿ ಯಾರೊಂದಿಗೋ ಹೋಗಿರಬೇಕು ಎಂದು ಉತ್ತರಿಸಿದ್ದಾನೆ.

ಅಲ್ಲದೆ ಈ ವೇಳೆ ರಕ್ಷಿತಾ ಅವರನ್ನು ಮನೆಯಲ್ಲಿ ಹುಡುಕಿದರೂ ಪತ್ತೆಯಾಗಿರುವುದಿಲ್ಲ. ಆದರೆ ಅ.8 ರ ಸಂಜೆ ವೇಳೆ ಎಲ್ಲೂರು ಗ್ರಾಮದ ದಿ. ಪೊಲ್ಲಶೆಟ್ಟಿ ಎಂಬುವರ ಹಾಡಿಯಲ್ಲಿರುವ ಪಾಳುಬಿದ್ದ ಕೆಸರು ನೀರು ತುಂಬಿರುವ ದೊಡ್ಡ ಬಾವಿಯಲ್ಲಿ ರಕ್ಷಿತಾ ಅವರ ಮೃತದೇಹ ನೀರಿನಲ್ಲಿ ಕವುಚಿ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಅದರಂತೆ ರಕ್ಷಿತಾ ಅವರು ಪಾಳು ಬಾವಿಗೆ ಬಿದ್ದಿರುವ ಅಥವಾ ಅವರನ್ನು ಇನ್ಯಾರೋ ದೂಡಿಹಾಕಿರುವ ಕಾರಣದಿಂದ ಆಕೆಯು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಸಾಧ್ಯತೆ ಇದ್ದು, ರಕ್ಷಿತಾರ ಮರಣದ ಬಗ್ಗೆ ಅವಳ ಗಂಡ ಸಂಜಯ ಆಚಾರಿಯ ಮೇಲೆ ಸಂಶಯವಿರುವುದಾಗಿ ಶಕುಂತಳಾ ಅವರು ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

3 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

9 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

9 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

10 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

10 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

10 hours ago